<p><strong>ಬೆಂಗಳೂರು:</strong> ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳ ನೂರಾರು ಸದಸ್ಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆಗಳು ರೈತ ಮತ್ತು ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ರಾಜಧಾನಿಗೆ ಬಂದಿದ್ದಾರೆ. ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪರೇಡ್ ನಡೆಸಲು ಸಿದ್ಧತೆ ನಡೆದಿದೆ. ನಗರದೊಳಗೆ ಕೇವಲ 125 ಟ್ರ್ಯಾಕ್ಟರ್ ಪ್ರವೇಶಿಸಲು ಅನುಮತಿ ನೀಡಿದ್ದು, ಸುಮಾರು 1 ಗಂಟೆಯ ವೇಳೆ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ.</p>.<p>'ಹಸಿರು ಶಾಲು ಹಾಕಿಕೊಂಡು ರೈತರ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗ ರೈತ ವಿರೋಧಿ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ' ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯಾರ್ಥಿಗಳು ಹಾಗೂ ಮಹಿಳಾ ಸಂಘಟನೆಗಳ ಸದಸ್ಯರೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳ ನೂರಾರು ಸದಸ್ಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆಗಳು ರೈತ ಮತ್ತು ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ರಾಜಧಾನಿಗೆ ಬಂದಿದ್ದಾರೆ. ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪರೇಡ್ ನಡೆಸಲು ಸಿದ್ಧತೆ ನಡೆದಿದೆ. ನಗರದೊಳಗೆ ಕೇವಲ 125 ಟ್ರ್ಯಾಕ್ಟರ್ ಪ್ರವೇಶಿಸಲು ಅನುಮತಿ ನೀಡಿದ್ದು, ಸುಮಾರು 1 ಗಂಟೆಯ ವೇಳೆ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ.</p>.<p>'ಹಸಿರು ಶಾಲು ಹಾಕಿಕೊಂಡು ರೈತರ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗ ರೈತ ವಿರೋಧಿ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ' ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯಾರ್ಥಿಗಳು ಹಾಗೂ ಮಹಿಳಾ ಸಂಘಟನೆಗಳ ಸದಸ್ಯರೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>