ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಕುಳಿತು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೋಮವಾರ ಬೆಳಿಗ್ಗೆ ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಧಿವೇಶನ ನಡೆಯುತ್ತಿರುವ ವಿಧಾನಸೌಧದತ್ತ ಹೋಗಿ ಮುತ್ತಿಗೆ ಹಾಕಲು ಮುಂದಾದರು. ಮಾರ್ಗಮಧ್ಯೆಯೇ ಪೊಲೀಸರು ಅವರನ್ನು ತಡೆದರು. ಹೀಗಾಗಿ, ರಸ್ತೆಯಲ್ಲಿ ಕುಳಿತು ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.