<p><strong>ಬೆಂಗಳೂರು: ‘</strong>ರೈತರ ಬಳಿ ಅಂಗೈ ಅಗಲ ಭೂಮಿಯೂ ಉಳಿಯದಂತೆ ಕಸಿದುಕೊಂಡು ಅದನ್ನು ಬಹುರಾಷ್ಟ್ರೀಯ ಕಂಪನಿಗಳ ಪಾಲಾಗಿಸಲು ರಾಜ್ಯ ಸರ್ಕಾರ ಹೊರಟಿದೆ’ ಎಂದುಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಭೂಸ್ವಾಧೀನ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಬಂಡವಾಳಶಾಹಿಗಳ ಮನೆಯಲ್ಲಿರುವ ನಾಯಿಗಳ ಹೆಸರಿನಲ್ಲಿಯೂ ಆಸ್ತಿ ಮಾಡಲು ಸರ್ಕಾರ ನೆರವಾಗುತ್ತಿದೆ’ ಎಂದರು.</p>.<p>‘ದೇಶದಾದ್ಯಂತ ಬಡವರ, ರೈತರ, ದಲಿತರ ಹೋರಾಟಗಳು ನಿರ್ಣಾಯಕ ಘಟ್ಟದಲ್ಲಿವೆ. ಬದುಕಲು ಜಾಗ ಕೊಡಿ, ದುಡಿಯಲು ಭೂಮಿಕೊಡಿ ಎಂದು ಕೇಳುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಬಡವರ ಭೂಮಿಯನ್ನು ಕಸಿದುಕೊಳ್ಳಲು ಹವಣಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸ್ವಾತಂತ್ರ್ಯ ಚಳವಳಿಗಳು ಬ್ರಿಟಿಷರನ್ನು ಓಡಿಸಲು ಮಾತ್ರ ನಡೆಯಲಿಲ್ಲ. ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ದೊರಕಿಸಿಕೊಡಲು ನಡೆದ ಹೋರಾಟ. ಪ್ರತಿಯೊಬ್ಬ ಪ್ರಜೆಗೂ ಅತನ ಹಕ್ಕುಗಳು ದೊರೆತಾಗ ಮಾತ್ರ ಸ್ವಾತಂತ್ರ್ಯ ಚಳವಳಿಯ ಧ್ಯೇಯ ಈಡೇರಲಿದೆ’ ಎಂದು ಪ್ರತಿಪಾದಿಸಿದರು.</p>.<p>‘ರೈತರ ಹಿತ ಕಾಪಾಡುವ ಬದಲು ಅವರಭೂಮಿ ಕಸಿದುಕೊಳ್ಳುವ ನೀತಿಗಳನ್ನು ಜಾರಿಗೊಳಿಸಲಾಗುತ್ತಿದೆ. ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ರೈತರ ಬಳಿ ಅಂಗೈ ಅಗಲ ಭೂಮಿಯೂ ಉಳಿಯದಂತೆ ಕಸಿದುಕೊಂಡು ಅದನ್ನು ಬಹುರಾಷ್ಟ್ರೀಯ ಕಂಪನಿಗಳ ಪಾಲಾಗಿಸಲು ರಾಜ್ಯ ಸರ್ಕಾರ ಹೊರಟಿದೆ’ ಎಂದುಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಭೂಸ್ವಾಧೀನ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಬಂಡವಾಳಶಾಹಿಗಳ ಮನೆಯಲ್ಲಿರುವ ನಾಯಿಗಳ ಹೆಸರಿನಲ್ಲಿಯೂ ಆಸ್ತಿ ಮಾಡಲು ಸರ್ಕಾರ ನೆರವಾಗುತ್ತಿದೆ’ ಎಂದರು.</p>.<p>‘ದೇಶದಾದ್ಯಂತ ಬಡವರ, ರೈತರ, ದಲಿತರ ಹೋರಾಟಗಳು ನಿರ್ಣಾಯಕ ಘಟ್ಟದಲ್ಲಿವೆ. ಬದುಕಲು ಜಾಗ ಕೊಡಿ, ದುಡಿಯಲು ಭೂಮಿಕೊಡಿ ಎಂದು ಕೇಳುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಬಡವರ ಭೂಮಿಯನ್ನು ಕಸಿದುಕೊಳ್ಳಲು ಹವಣಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸ್ವಾತಂತ್ರ್ಯ ಚಳವಳಿಗಳು ಬ್ರಿಟಿಷರನ್ನು ಓಡಿಸಲು ಮಾತ್ರ ನಡೆಯಲಿಲ್ಲ. ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ದೊರಕಿಸಿಕೊಡಲು ನಡೆದ ಹೋರಾಟ. ಪ್ರತಿಯೊಬ್ಬ ಪ್ರಜೆಗೂ ಅತನ ಹಕ್ಕುಗಳು ದೊರೆತಾಗ ಮಾತ್ರ ಸ್ವಾತಂತ್ರ್ಯ ಚಳವಳಿಯ ಧ್ಯೇಯ ಈಡೇರಲಿದೆ’ ಎಂದು ಪ್ರತಿಪಾದಿಸಿದರು.</p>.<p>‘ರೈತರ ಹಿತ ಕಾಪಾಡುವ ಬದಲು ಅವರಭೂಮಿ ಕಸಿದುಕೊಳ್ಳುವ ನೀತಿಗಳನ್ನು ಜಾರಿಗೊಳಿಸಲಾಗುತ್ತಿದೆ. ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>