ಆಯುಧಪೂಜೆ ಮತ್ತು ವಿಜಯದಶಮಿ ಅಂಗವಾಗಿ ಭಾರತ್ ಜೋಡೊ ಪಾದಯಾತ್ರೆಗೆ 2 ದಿನ ಬಿಡುವು ನೀಡಲಾಗಿದ್ದು, ಅ.6ರಂದು ಮಂಡ್ಯದ ಪಾಂಡವಪುರದಿಂದ ಪಾದಯಾತ್ರೆ ಪುನರಾರಂಭಗೊಳ್ಳಲಿದೆ. ಈ ಮಧ್ಯೆ ಪಾದಯಾತ್ರೆ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಅನ್ನದಾತರಿಗೆ ನ್ಯಾಯ ಒದಗಿಸದೆ ಈ ಹೋರಾಟ ಕೊನೆಗೊಳ್ಳುವುದಿಲ್ಲ ಎಂದಿದ್ದಾರೆ.