ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಆತ್ಮಹತ್ಯೆ: ಕುಟುಂಬಕ್ಕೆ ನೆರವಾಗಲು ಸೂಚನೆ

Last Updated 21 ಏಪ್ರಿಲ್ 2021, 18:10 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಲೇವಾದೇವಿಗಾರರಿಂದ ಸಾಲ ಪಡೆದು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೆರವಾಗಲು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸಲ್ಲಿಸಿದ್ದ ಪ್ರತಿಕ್ರಿಯೆ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಎಂಟು ವಾರಗಳಲ್ಲಿ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ತಿಳಿಸಿತು.

ನ್ಯಾಯಾಲಯದ ಈ ಹಿಂದಿನ ಆದೇಶವನ್ನು ಮುಖ್ಯ ಕಾರ್ಯದರ್ಶಿ ಪಾಲಿಸಿಲ್ಲ ಎಂದ ಪೀಠ, ನ್ಯಾಯಾಲಯದ ಈ ಆದೇಶವನ್ನು ನೀತಿ, ನಿರ್ಧಾರ ಕೈಗೊಳ್ಳುವ ಸೂಕ್ತ ಪ್ರಾಧಿಕಾರದ ಮುಂದೆ ಮಂಡಿಸುವಂತೆ ಸೂಚನೆ ನೀಡಿತು. ವಿಚಾರಣೆಯನ್ನು ಜೂ.11ಕ್ಕೆ ನಿಗದಿ ಮಾಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅಖಂಡ ಕರ್ನಾಟಕ ರೈತ ಸಂಘ, ‘ಕಳೆದ ಎರಡು ದಶಕಗಳ ಅವಧಿಯಲ್ಲಿ ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT