ದ್ರಾಕ್ಷಿ ಬೆಳೆಗೆ ಅಪಾರ ಹಾನಿ: ಜಮಖಂಡಿ ಭಾಗದಲ್ಲಿ ಬುಧವಾರ ರಾತ್ರಿ ಬಿದ್ದ ಮಳೆಯಿಂದಾಗಿ, ₹40 ಕೋಟಿಗೂ ಹೆಚ್ಚು ಮೌಲ್ಯದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ತಾಲ್ಲೂಕಿನಲ್ಲಿ ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗಿದೆ. ಈ ಭಾಗದಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರ ದ್ರಾಕ್ಷಿ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ತೇರದಾಳ ಭಾಗದಲ್ಲಿ ಆಲಿಕಲ್ಲು ಮಳೆಯಾಗಿರುವುದರಿಂದ ಗೋಧಿ ಬೆಳೆ ಹಾನಿಯಾಗಿದೆ. ಬಾದಾಮಿಯಲ್ಲಿಯೂ ಜಿಟಿ ಜಿಟಿ ಮಳೆಯಾಗಿದ್ದು, ಮಹಾಲಿಂಗಪುರ, ಬಾಗಲಕೋಟೆಯಲ್ಲಿಯೂ ತುಂತುರು ಮಳೆಯಾಗಿದೆ.