<p><strong>ಬೆಂಗಳೂರು</strong>: ಭವಿಷ್ಯ ನಿಧಿ ಪ್ರಾಧಿಕಾರದಿಂದ ನ್ಯಾಯಯುತ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನಿವೃತ್ತ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದ ತನಕ ಮೆರವಣಿಗೆ ನಡೆಸಿ, ಬಳಿಕ ಧರಣಿ ನಡೆಸಿದರು.</p>.<p>ಕೇಂದ್ರ ಸರ್ಕಾರ 1995ರಲ್ಲಿ ಜಾರಿಗೆ ತಂದ (ಇಪಿಎಸ್-95) ಪಿಂಚಣಿ ಯೋಜನೆಗೆ ಸಾರಿಗೆ ಸಂಸ್ಥೆಗಳ ನೌಕರರನ್ನೂ ಸೇರ್ಪಡೆ ಮಾಡಲಾಗಿದೆ. ನೌಕರರಿಂದ ಭವಿಷ್ಯ ನಿಧಿಗೆ ಹಣದ ವಂತಿಗೆ ಸಲ್ಲಿಸಲಾಗಿದೆ. ಆದರೆ, 25ರಿಂದ 35 ವರ್ಷಗಳ ಸೇವೆ ಸಲ್ಲಿಸಿದ ನೌಕರರಿಗೆ ತಿಂಗಳಿಗೆ ಕನಿಷ್ಠ ₹1 ಸಾವಿರದಿಂದ ಗರಿಷ್ಠ 3₹ ಸಾವಿರ ಪಿಂಚಣಿಯನ್ನು ಭವಿಷ್ಯ ನಿಧಿ ಪ್ರಾಧಿಕಾರ ನೀಡುತ್ತಿದೆ ಎಂದು ಪ್ರತಿಭಟನನಿರತರು ಹೇಳಿದರು.</p>.<p>‘ಸುಪ್ರೀಂ ಕೋರ್ಟ್ 2016ರಲ್ಲಿ ನ್ಯಾಯಯುತ ಪಿಂಚಣಿ ನೀಡಬೇಕು ಎಂದು ಆದೇಶಿಸಿದ್ದರೂ, ಅದನ್ನು ಪ್ರಾಧಿಕಾರ ಪಾಲಿಸುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಬೇರೆ ಸಂಸ್ಥೆಗಳ ನಿವೃತ್ತ ನೌಕರರಿಗೆ ನೀಡುತ್ತಿರುವ ಮಾದರಿಯಲ್ಲೇ ಸಾರಿಗೆ ಸಂಸ್ಥೆ ನಿವೃತ್ತ ನೌಕರರಿಗೂ ಪಿಂಚಣಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರಾದಿಕಾರ ಸ್ಪಂದಿಸದ ಕಾರಣಕ್ಕೆ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗಿದೆ ಎಂದು ಸಂಘದ ಅಧ್ಯಕ್ಷ ಶಂಕರ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭವಿಷ್ಯ ನಿಧಿ ಪ್ರಾಧಿಕಾರದಿಂದ ನ್ಯಾಯಯುತ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನಿವೃತ್ತ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದ ತನಕ ಮೆರವಣಿಗೆ ನಡೆಸಿ, ಬಳಿಕ ಧರಣಿ ನಡೆಸಿದರು.</p>.<p>ಕೇಂದ್ರ ಸರ್ಕಾರ 1995ರಲ್ಲಿ ಜಾರಿಗೆ ತಂದ (ಇಪಿಎಸ್-95) ಪಿಂಚಣಿ ಯೋಜನೆಗೆ ಸಾರಿಗೆ ಸಂಸ್ಥೆಗಳ ನೌಕರರನ್ನೂ ಸೇರ್ಪಡೆ ಮಾಡಲಾಗಿದೆ. ನೌಕರರಿಂದ ಭವಿಷ್ಯ ನಿಧಿಗೆ ಹಣದ ವಂತಿಗೆ ಸಲ್ಲಿಸಲಾಗಿದೆ. ಆದರೆ, 25ರಿಂದ 35 ವರ್ಷಗಳ ಸೇವೆ ಸಲ್ಲಿಸಿದ ನೌಕರರಿಗೆ ತಿಂಗಳಿಗೆ ಕನಿಷ್ಠ ₹1 ಸಾವಿರದಿಂದ ಗರಿಷ್ಠ 3₹ ಸಾವಿರ ಪಿಂಚಣಿಯನ್ನು ಭವಿಷ್ಯ ನಿಧಿ ಪ್ರಾಧಿಕಾರ ನೀಡುತ್ತಿದೆ ಎಂದು ಪ್ರತಿಭಟನನಿರತರು ಹೇಳಿದರು.</p>.<p>‘ಸುಪ್ರೀಂ ಕೋರ್ಟ್ 2016ರಲ್ಲಿ ನ್ಯಾಯಯುತ ಪಿಂಚಣಿ ನೀಡಬೇಕು ಎಂದು ಆದೇಶಿಸಿದ್ದರೂ, ಅದನ್ನು ಪ್ರಾಧಿಕಾರ ಪಾಲಿಸುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಬೇರೆ ಸಂಸ್ಥೆಗಳ ನಿವೃತ್ತ ನೌಕರರಿಗೆ ನೀಡುತ್ತಿರುವ ಮಾದರಿಯಲ್ಲೇ ಸಾರಿಗೆ ಸಂಸ್ಥೆ ನಿವೃತ್ತ ನೌಕರರಿಗೂ ಪಿಂಚಣಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರಾದಿಕಾರ ಸ್ಪಂದಿಸದ ಕಾರಣಕ್ಕೆ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗಿದೆ ಎಂದು ಸಂಘದ ಅಧ್ಯಕ್ಷ ಶಂಕರ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>