‘ಪ್ರಶ್ನೆಪತ್ರಿಕೆ ಪಡೆದವರೂ ಆರೋಪಿಗಳು. ಅದನ್ನು ನೀಡಿದವರು ಮತ್ತು ಪಡೆದವರು, ಇದರಲ್ಲಿ ಶಾಮೀಲಾಗಿರುವವರ ಮಾಹಿತಿ ತನಿಖೆಯಿಂದ ಬಹಿರಂಗವಾಗಬೇಕು.ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಿಸಿಬಿ ಅಧಿಕಾರಿಗಳು ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಅವರನ್ನೂ ಶೀಘ್ರವಾಗಿ ಬಂಧಿಸಲು ಸಿಸಿಬಿಗೆ ಸೂಚಿಸಲಾಗಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ’ ಎಂದೂ ಹೇಳಿದ್ದಾರೆ.