'ಬಿಳಿಕಲ್ ದಟ್ಟ ಅರಣ್ಯ ಪ್ರದೇಶದಿಂದ ಆವೃತವಾಗಿರುವ ಗ್ರಾಮದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರು ಸಮೃದ್ಧವಾಗಿ ಬೆಳೆಯುವ ರಾಗಿ, ಹಿಪ್ಪುನೇರಳೆ ಹಾಗೂ ತರಕಾರಿ ಬೆಳೆಗಳನ್ನು ತಿನ್ನಲು ಹಾಗೂ ಹೇರಳವಾದ ನೀರಿನ ಲಭ್ಯತೆ ಇರುವುದರಿಂದ ಬಾಯಾರಿಕೆ ತಣಿಸಿಕೊಳ್ಳಲು ಅರಣ್ಯ ಪ್ರದೇಶದಿಂದ ಆನೆಗಳು ಹಿಂಡಾಗಿ ಜಮೀನುಗಳಿಗೆ ಲಗ್ಗೆ ಇಡುತ್ತಿವೆ. ಇದು ಮಾನವ-ಆನೆ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದೆ’ ಎಂದು ಪತ್ರದಲ್ಲಿ ವಸತಿ ಸಚಿವರು ವಿವರಿಸಿದ್ದಾರೆ.