ಪರಿಹಾರದ ಶೇ 50 ರಷ್ಟು ಮೊತ್ತವನ್ನು ಪರಿಸರ ಮೂಲಸೌಕರ್ಯ ಸುಧಾರಣೆಗೆ ಬಳಸಬೇಕು. ಮುಖ್ಯವಾಗಿ ನೀರು ಪೂರೈಕೆ, ಚರಂಡಿ, ಎಸ್ಟಿಪಿ, ಘನತ್ಯಾಜ್ಯ ವಿಲೇವಾರಿ ನಿರ್ವಹಣೆ, ಆರೋಗ್ಯ ಸೌಲಭ್ಯ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಬೇಕು. ಮಧ್ಯಂತರ ಆದೇಶದ ಅನ್ವಯ ಯುಪಿಸಿಎಲ್ ಈಗಾಗಲೇ ₹5 ಕೋಟಿ ಠೇವಣಿ ಇರಿಸಿದೆ. ಉಳಿದ ಮೊತ್ತವನ್ನು ಮುಂದಿನ ಮೂರು ತಿಂಗಳಲ್ಲಿ ಪಾವತಿಸಬೇಕು ಎಂದು ಹಸಿರು ಪೀಠ ಸೂಚಿಸಿದೆ. ಉಷ್ಣ ವಿದ್ಯುತ್ ಸ್ಥಾವರದ 10 ಕಿ.ಮೀ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ಯುಪಿಸಿಎಲ್ ಚಟುವಟಿಕೆಯಿಂದ ಆಗಿರುವ ಹಾನಿಯ ಬಗ್ಗೆ ವಿಸ್ತೃತ ಅಧ್ಯಯನ ನಡೆಸಲು ನ್ಯಾಯಪೀಠ ಜಂಟಿ ಸಮಿತಿಯನ್ನೂ ನೇಮಿಸಿದೆ. ಅದರಲ್ಲಿ ಜಿಲ್ಲಾಧಿಕಾರಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ನಿರ್ದೇಶಕರು ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ
ವಿಜ್ಞಾನಿಯೊಬ್ಬರು ಇರಲಿದ್ದಾರೆ.