ಶಿಕ್ಷಣ ಕ್ಷೇತ್ರದ ಕರಡು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನದ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಯಾರಿಸಿರುವ ಕರಡು ಕಾರ್ಯಸೂಚಿಯ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಅವರು ಇಲಾಖೆಯ ಅಧಿಕಾರಿಗಳ ಜೊತೆ ಗುರುವಾರ ವೆಬಿನಾರ್ ಮೂಲಕ ಸಭೆ ನಡೆಸಿದರು. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸಮಗ್ರ ಶಿಕ್ಷಣ ಯೋಜನಾ ನಿರ್ದೇಶಕಿ ದೀಪಾ, ಶಿಕ್ಷಣ ಇಲಾಖೆಯ ಆಯುಕ್ತ ಅನ್ಬು ಕುಮಾರ್, ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಕೃಷ್ಣಾಜಿ ಕರಿಚನ್ನಣ್ಣನವರ್, ಸಮಗ್ರ ಶಿಕ್ಷಣದ ಗೋಪಾಲಕೃಷ್ಣ ಹಾಗೂ ಕಾರ್ಯಪಡೆಯ ಸದಸ್ಯರೂ ಆಗಿರುವ ವಿಧಾನಪರಿಷತ್ ಸದಸ್ಯ ಅರುಣ್ ಶಹಾ ಪುರ, ಅಜೀಂ ಪ್ರೇಂಜಿ ವಿಶ್ವವಿದ್ಯಾಲ ಯದ ಹೃಷಿಕೇಶ್ ಭಾಗವಹಿಸಿದರು.