<p><strong>ಬೆಂಗಳೂರು: </strong>2015ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದ ಖಾಲಿಯಾಗಿದ್ದ ಅನುದಾನಿತ ಪದವಿಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.</p>.<p>ಅನುದಾನಿತ ಪದವಿಪೂರ್ವ ಕಾಲೇಜುಗಳ 173 ಉಪನ್ಯಾಸಕರ ಹುದ್ದೆ ಭರ್ತಿಯ ಪ್ರಸ್ತಾವವನ್ನು ಹಿಂದೆಯೇ ಅನುಮೋದಿಸಲಾಗಿತ್ತು. ನೇಮಕಾತಿ ಪ್ರಕ್ರಿಯೆಯೂ ಆರಂಭವಾಗಿತ್ತು. ಆದರೆ, ಇಲಾಖೆಯ ಹಂತದಲ್ಲೇ ಪ್ರಕ್ರಿಯೆ ಸ್ಥಗಿತಗೊಂಡಿತ್ತು.</p>.<p>ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಾಗಿದ್ದ 257 ಶಿಕ್ಷಕರ ಹುದ್ದೆಗಳ ಭರ್ತಿಗೂ ಹಿಂದೆಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಹಣಕಾಸು ಇಲಾಖೆ ಒಪ್ಪಿಗೆ ನೀಡಿರಲಿಲ್ಲ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪುನಃ ಈ ಎರಡೂ ಪ್ರಕರಣಗಳಲ್ಲಿ ನೇಮಕಾತಿಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಸ್ತಾವ ಸಲ್ಲಿಸಿದ್ದರು. ಮುಖ್ಯಮಂತ್ರಿಯವರು ಅದನ್ನು ಅನುಮೋದಿಸಿದ್ದರು.</p>.<p>173 ಉಪನ್ಯಾಸಕರು ಮತ್ತು 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಫೆಬ್ರುವರಿ 23ರಂದು ಒಪ್ಪಿಗೆ ನೀಡಿರುವ ಆರ್ಥಿಕ ಇಲಾಖೆ, 2021–22ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ (ಜೂನ್ ಅಥವಾ ಜುಲೈ) ನೇಮಕಾತಿ ಆದೇಶ ನೀಡುವಂತೆ ಷರತ್ತು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2015ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದ ಖಾಲಿಯಾಗಿದ್ದ ಅನುದಾನಿತ ಪದವಿಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.</p>.<p>ಅನುದಾನಿತ ಪದವಿಪೂರ್ವ ಕಾಲೇಜುಗಳ 173 ಉಪನ್ಯಾಸಕರ ಹುದ್ದೆ ಭರ್ತಿಯ ಪ್ರಸ್ತಾವವನ್ನು ಹಿಂದೆಯೇ ಅನುಮೋದಿಸಲಾಗಿತ್ತು. ನೇಮಕಾತಿ ಪ್ರಕ್ರಿಯೆಯೂ ಆರಂಭವಾಗಿತ್ತು. ಆದರೆ, ಇಲಾಖೆಯ ಹಂತದಲ್ಲೇ ಪ್ರಕ್ರಿಯೆ ಸ್ಥಗಿತಗೊಂಡಿತ್ತು.</p>.<p>ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಾಗಿದ್ದ 257 ಶಿಕ್ಷಕರ ಹುದ್ದೆಗಳ ಭರ್ತಿಗೂ ಹಿಂದೆಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಹಣಕಾಸು ಇಲಾಖೆ ಒಪ್ಪಿಗೆ ನೀಡಿರಲಿಲ್ಲ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪುನಃ ಈ ಎರಡೂ ಪ್ರಕರಣಗಳಲ್ಲಿ ನೇಮಕಾತಿಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಸ್ತಾವ ಸಲ್ಲಿಸಿದ್ದರು. ಮುಖ್ಯಮಂತ್ರಿಯವರು ಅದನ್ನು ಅನುಮೋದಿಸಿದ್ದರು.</p>.<p>173 ಉಪನ್ಯಾಸಕರು ಮತ್ತು 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಫೆಬ್ರುವರಿ 23ರಂದು ಒಪ್ಪಿಗೆ ನೀಡಿರುವ ಆರ್ಥಿಕ ಇಲಾಖೆ, 2021–22ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ (ಜೂನ್ ಅಥವಾ ಜುಲೈ) ನೇಮಕಾತಿ ಆದೇಶ ನೀಡುವಂತೆ ಷರತ್ತು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>