‘ಮೆಸರ್ಸ್ ಬಾಲಾಜಿ ಕೃಪ ಎಂಟರ್ಪ್ರೈಸಸ್ ಮಾಲೀಕತ್ವ ಹೊಂದಿದ್ದ ಕೃಷ್ಣಯ್ಯ ಶೆಟ್ಟಿ ನಾಲ್ಕು ವರ್ಷಗಳ ಅವಧಿಯಲ್ಲಿ ಲೇ ಔಟ್ ನಿರ್ಮಾಣಕ್ಕಾಗಿ ಬ್ಯಾಂಕ್ನಿಂದ ಪಡೆದಿದ್ದ ಸಾಲ ₹ 7.17 ಕೋಟಿಗೂ ಹೆಚ್ಚಿದ್ದು, ಇದರಲ್ಲಿ ಅವರು ₹ 3.25 ಕೋಟಿ ಸಾಲವನ್ನು ಇನ್ನೂ ತೀರಿಸಿಲ್ಲ’ ಎಂದು ಸಿಬಿಐ ಈ ಪ್ರಕರಣ ದಾಖಲಿಸಿತ್ತು. ಹೈಕೋರ್ಟ್ನ ಈ ತೀರ್ಪಿನಿಂದಾಗಿ, ಕೃಷ್ಣಯ್ಯ ಶೆಟ್ಟಿ ಸಿಬಿಐ ವಿಚಾರಣಾ ನ್ಯಾಯಾಲಯದಲ್ಲಿ ಖುದ್ದು ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದೆ.