ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ನಿರ್ಮಾಣಕ್ಕೆ 2008ರಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ರಾಜ್ಯ ನೀರಾವರಿ ನಿಗಮ ಸಲ್ಲಿಸಿದ್ದ ಮೇಲ್ಮನವಿಯ ಮುಂದುವರಿದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಕೃಷ್ಣ ದಿಕ್ಷೀತ್ ಮತ್ತು ಪ್ರದೀಪಸಿಂಗ್ ಯರೂರ ಅವರಿದ್ದ ವಿಭಾಗೀಯ ಪೀಠ, ‘ಸಾರ್ವಜನಿಕ ಸ್ವತ್ತಿನ ರಕ್ಷಣೆ ಮಾಡುವುದು ನ್ಯಾಯಾಲಯಗಳ ಜವಾಬ್ದಾರಿ. ನೀರಾವರಿ ನಿಗಮಕ್ಕಾಗಿ ಸಾವಿರಾರು ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅದಕ್ಕಾಗಿ ಪರಿಹಾರವೂ ನೀಡಲಾಗಿದೆ. ಇಷ್ಟು ವರ್ಷಗಳಾದರೂ ಮೂಲ ಮಾಲೀಕರ ಹೆಸರು ಕಡಿಮೆ ಮಾಡಿ, ನಿಮಗದ ಹೆಸರು ದಾಖಲಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದೊಂದು ಗಂಭೀರ ಪ್ರಕರಣ’ ಎಂದು ಅಭಿಪ್ರಾಯಪಟ್ಟಿತು.