<p><strong>ಬೆಂಗಳೂರು:</strong> ಸಚಿವ ರಮೇಶ ಜಾರಕಿಹೊಳಿ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಂತ್ರಸ್ತೆ ಹೇಳಿಕೆ ಪಡೆದ ಬಳಿಕವೇ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವ ಸಾಧ್ಯತೆಇದೆ.</p>.<p>‘ಪ್ರಕರಣದಲ್ಲಿ ಮೂರನೇ ವ್ಯಕ್ತಿ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೇಳಿಕೆಯೇ ಮಹತ್ವ ಪಡೆದುಕೊಳ್ಳುತ್ತದೆ. ಹೀಗಾಗಿ, ಹೇಳಿಕೆ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಹೇಳಿಕೆ ದಾಖಲಾದ ನಂತರವೇ ಮುಂದಿನ ಕಾನೂನು ಕ್ರಮ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉತ್ತರ ಕರ್ನಾಟಕದ ಯುವತಿ, ಬೆಂಗಳೂರಿನಲ್ಲಿ ವಾಸವಿದ್ದರು. ಸಿ.ಡಿ ಬಗ್ಗೆ ದೂರು ಸ್ವೀಕರಿಸಿರುವ ಪೊಲೀಸರು, ಇದೀಗ ಯುವತಿ ಹಾಗೂ ಆಕೆಯ ಕುಟುಂಬದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ’.</p>.<p>‘ಸಂತ್ರಸ್ತೆ ಪರವಾಗಿ ದೂರು ನೀಡಿರುವ ದಿನೇಶ್, ‘ಸಚಿವ ರಮೇಶ ಜಾರಕಿಹೊಳಿ ಆರೋಪಿ’ ಎಂದು ಹೇಳಿದ್ದಾರೆ. ಆದರೆ, ಪ್ರಕರಣದ ಸಂತ್ರಸ್ತೆ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಹೀಗಾಗಿ ಅವರ ಹಾಗೂ ಕುಟುಂಬದವರ ಹೇಳಿಕೆ ಪಡೆಯಬೇಕು. ಹೇಳಿಕೆ ಪಡೆದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿ ಹೇಳಿದರು.</p>.<p>ಪ್ರಕರಣದ ಮಾಹಿತಿ ಕಲೆ ಹಾಕಲೆಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಈಗಾಗಲೇ ವಿಶೇಷ ತಂಡವೊಂದನ್ನುರಚಿಸಿದ್ದಾರೆ.</p>.<p><strong>‘ಸಂತ್ರಸ್ತೆ ಸಂಬಂಧಿ ನೀಡಿದ ಮಾಹಿತಿ ಆಧರಿಸಿ ದೂರು’</strong></p>.<p>‘ಪ್ರಭಾವಿ ಸಚಿವರಿಂದ ಯುವತಿಗೆ ಆದ ಅನ್ಯಾಯದ ಬಗ್ಗೆ ಕುಟುಂಬದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು. ಅದರನ್ವಯ ವಕೀಲರ ಸಲಹೆ ಪಡೆದು ಠಾಣೆಗೆ ದೂರು ನೀಡಿದ್ದೇನೆ’ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ತಿಳಿಸಿದರು.</p>.<p>ಕಬ್ಬನ್ ಪಾರ್ಕ್ ಠಾಣೆಗೆ ಮಂಗಳವಾರ ರಾತ್ರಿ ದೂರು ನೀಡಿ ಹೊರಬಂದ ದಿನೇಶ್, ‘ನೊಂದ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ಆರಂಭಿಸಿದ್ದೇನೆ. ಪೊಲೀಸರು ಹಾಗೂ ನ್ಯಾಯಾಂಗದ ಮೇಲೆ ವಿಶ್ವಾಸವಿದೆ’ ಎಂದರು.</p>.<p>‘ಯುವತಿ ಹಾಗೂ ಆಕೆಯ ಕುಟುಂಬದವರಿಗೆ ಸಚಿವರಿಂದ ಬೆದರಿಕೆ ಇದೆ. ಸಂತ್ರಸ್ತೆ ಹಾಗೂ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗವಾಗಿ ಹೇಳಲು ಆಗದು’ ಎಂದೂ ಹೇಳಿದರು.</p>.<p>‘ದೂರು ನೀಡುವ ವೇಳೆ ಪೊಲೀಸರು ಹಲವು ಮಾಹಿತಿ ಕೇಳಿದ್ದಾರೆ. ತನಿಖೆಗೆ ಅಗತ್ಯವಾದ ಎಲ್ಲ ಮಾಹಿತಿ ನೀಡಿದ್ದೇನೆ. ಮುಂದೆಯೂ ನೀಡುತ್ತೇನೆ’ ಎಂದರು.</p>.<p><strong>ಸೋಮವಾರ ಸಿ.ಡಿ ಸಿಕ್ಕಿತ್ತು:</strong> ‘ಸಚಿವರು ಯುವತಿ ಜೊತೆಗಿದ್ದ ಹಾಗೂ ಸಂಭಾಷಣೆ ನಡೆಸಿದ್ದ ದೃಶ್ಯಗಳ ಸಿ.ಡಿ, ಸೋಮವಾರ ಬೆಳಿಗ್ಗೆ ಸಿಕ್ಕಿತ್ತು. ವಕೀಲರಿಂದ<br />ಕಾನೂನು ಸಲಹೆ ಪಡೆದು, ಎಲ್ಲ ಮಾಹಿತಿ ಕಲೆ ಹಾಕಿ ದೂರು ನೀಡಿದ್ದೇನೆ’ ಎಂದೂ ದಿನೇಶ್<br />ಹೇಳಿದರು.</p>.<p><strong>ಕಮಿಷನರ್ ಕಚೇರಿಗೆ ಹೋಗಿದ್ದರು:</strong> ‘ಪ್ರಭಾವಿ ಸಚಿವರೊಬ್ಬರ ಸಿ.ಡಿ ಬಗ್ಗೆ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡುತ್ತೇನೆ’ ಎಂದು ಮಂಗಳವಾರ ಮಧ್ಯಾಹ್ನವೇ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದ ದಿನೇಶ್, ಇನ್ಫೆಂಟ್ರಿ ರಸ್ತೆಯಲ್ಲಿರುವ ಕಮಿಷನರ್ ಕಚೇರಿಗೆ ಸಂಜೆ ಬಂದಿದ್ದರು.</p>.<p>ದೂರನ್ನು ಪರಿಶೀಲಿಸಿದ ಕಮಿಷನರ್, ಕಬ್ಬನ್ ಪಾರ್ಕ್ ಠಾಣೆಗೆ ಹೋಗುವಂತೆ ತಿಳಿಸಿದ್ದರು. ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ ನಂತರ ಬಿಗಿ ಭದ್ರತೆಯಲ್ಲಿ ದಿನೇಶ್ ಸ್ಥಳದಿಂದ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವ ರಮೇಶ ಜಾರಕಿಹೊಳಿ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಂತ್ರಸ್ತೆ ಹೇಳಿಕೆ ಪಡೆದ ಬಳಿಕವೇ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವ ಸಾಧ್ಯತೆಇದೆ.</p>.<p>‘ಪ್ರಕರಣದಲ್ಲಿ ಮೂರನೇ ವ್ಯಕ್ತಿ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೇಳಿಕೆಯೇ ಮಹತ್ವ ಪಡೆದುಕೊಳ್ಳುತ್ತದೆ. ಹೀಗಾಗಿ, ಹೇಳಿಕೆ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಹೇಳಿಕೆ ದಾಖಲಾದ ನಂತರವೇ ಮುಂದಿನ ಕಾನೂನು ಕ್ರಮ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉತ್ತರ ಕರ್ನಾಟಕದ ಯುವತಿ, ಬೆಂಗಳೂರಿನಲ್ಲಿ ವಾಸವಿದ್ದರು. ಸಿ.ಡಿ ಬಗ್ಗೆ ದೂರು ಸ್ವೀಕರಿಸಿರುವ ಪೊಲೀಸರು, ಇದೀಗ ಯುವತಿ ಹಾಗೂ ಆಕೆಯ ಕುಟುಂಬದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ’.</p>.<p>‘ಸಂತ್ರಸ್ತೆ ಪರವಾಗಿ ದೂರು ನೀಡಿರುವ ದಿನೇಶ್, ‘ಸಚಿವ ರಮೇಶ ಜಾರಕಿಹೊಳಿ ಆರೋಪಿ’ ಎಂದು ಹೇಳಿದ್ದಾರೆ. ಆದರೆ, ಪ್ರಕರಣದ ಸಂತ್ರಸ್ತೆ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಹೀಗಾಗಿ ಅವರ ಹಾಗೂ ಕುಟುಂಬದವರ ಹೇಳಿಕೆ ಪಡೆಯಬೇಕು. ಹೇಳಿಕೆ ಪಡೆದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿ ಹೇಳಿದರು.</p>.<p>ಪ್ರಕರಣದ ಮಾಹಿತಿ ಕಲೆ ಹಾಕಲೆಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಈಗಾಗಲೇ ವಿಶೇಷ ತಂಡವೊಂದನ್ನುರಚಿಸಿದ್ದಾರೆ.</p>.<p><strong>‘ಸಂತ್ರಸ್ತೆ ಸಂಬಂಧಿ ನೀಡಿದ ಮಾಹಿತಿ ಆಧರಿಸಿ ದೂರು’</strong></p>.<p>‘ಪ್ರಭಾವಿ ಸಚಿವರಿಂದ ಯುವತಿಗೆ ಆದ ಅನ್ಯಾಯದ ಬಗ್ಗೆ ಕುಟುಂಬದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು. ಅದರನ್ವಯ ವಕೀಲರ ಸಲಹೆ ಪಡೆದು ಠಾಣೆಗೆ ದೂರು ನೀಡಿದ್ದೇನೆ’ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ತಿಳಿಸಿದರು.</p>.<p>ಕಬ್ಬನ್ ಪಾರ್ಕ್ ಠಾಣೆಗೆ ಮಂಗಳವಾರ ರಾತ್ರಿ ದೂರು ನೀಡಿ ಹೊರಬಂದ ದಿನೇಶ್, ‘ನೊಂದ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ಆರಂಭಿಸಿದ್ದೇನೆ. ಪೊಲೀಸರು ಹಾಗೂ ನ್ಯಾಯಾಂಗದ ಮೇಲೆ ವಿಶ್ವಾಸವಿದೆ’ ಎಂದರು.</p>.<p>‘ಯುವತಿ ಹಾಗೂ ಆಕೆಯ ಕುಟುಂಬದವರಿಗೆ ಸಚಿವರಿಂದ ಬೆದರಿಕೆ ಇದೆ. ಸಂತ್ರಸ್ತೆ ಹಾಗೂ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗವಾಗಿ ಹೇಳಲು ಆಗದು’ ಎಂದೂ ಹೇಳಿದರು.</p>.<p>‘ದೂರು ನೀಡುವ ವೇಳೆ ಪೊಲೀಸರು ಹಲವು ಮಾಹಿತಿ ಕೇಳಿದ್ದಾರೆ. ತನಿಖೆಗೆ ಅಗತ್ಯವಾದ ಎಲ್ಲ ಮಾಹಿತಿ ನೀಡಿದ್ದೇನೆ. ಮುಂದೆಯೂ ನೀಡುತ್ತೇನೆ’ ಎಂದರು.</p>.<p><strong>ಸೋಮವಾರ ಸಿ.ಡಿ ಸಿಕ್ಕಿತ್ತು:</strong> ‘ಸಚಿವರು ಯುವತಿ ಜೊತೆಗಿದ್ದ ಹಾಗೂ ಸಂಭಾಷಣೆ ನಡೆಸಿದ್ದ ದೃಶ್ಯಗಳ ಸಿ.ಡಿ, ಸೋಮವಾರ ಬೆಳಿಗ್ಗೆ ಸಿಕ್ಕಿತ್ತು. ವಕೀಲರಿಂದ<br />ಕಾನೂನು ಸಲಹೆ ಪಡೆದು, ಎಲ್ಲ ಮಾಹಿತಿ ಕಲೆ ಹಾಕಿ ದೂರು ನೀಡಿದ್ದೇನೆ’ ಎಂದೂ ದಿನೇಶ್<br />ಹೇಳಿದರು.</p>.<p><strong>ಕಮಿಷನರ್ ಕಚೇರಿಗೆ ಹೋಗಿದ್ದರು:</strong> ‘ಪ್ರಭಾವಿ ಸಚಿವರೊಬ್ಬರ ಸಿ.ಡಿ ಬಗ್ಗೆ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡುತ್ತೇನೆ’ ಎಂದು ಮಂಗಳವಾರ ಮಧ್ಯಾಹ್ನವೇ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದ ದಿನೇಶ್, ಇನ್ಫೆಂಟ್ರಿ ರಸ್ತೆಯಲ್ಲಿರುವ ಕಮಿಷನರ್ ಕಚೇರಿಗೆ ಸಂಜೆ ಬಂದಿದ್ದರು.</p>.<p>ದೂರನ್ನು ಪರಿಶೀಲಿಸಿದ ಕಮಿಷನರ್, ಕಬ್ಬನ್ ಪಾರ್ಕ್ ಠಾಣೆಗೆ ಹೋಗುವಂತೆ ತಿಳಿಸಿದ್ದರು. ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ ನಂತರ ಬಿಗಿ ಭದ್ರತೆಯಲ್ಲಿ ದಿನೇಶ್ ಸ್ಥಳದಿಂದ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>