ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಮಿಕಲ್ ಲಾರಿಗೆ ಬೆಂಕಿ: ಮೂವರು ಸಜೀವ  ದಹನ

Last Updated 21 ಮಾರ್ಚ್ 2021, 8:11 IST
ಅಕ್ಷರ ಗಾತ್ರ

ಹಾಸನ: ಅರಕಲಗೂಡು ತಾಲ್ಲೂಕಿನ ಬಸವನ ಹಳ್ಳಿ ಪಡುವಲಹಿಪ್ಪೆ ರಸ್ತೆ ತಿರುವಿನಲ್ಲಿ ಶನಿವಾರ ತಡರಾತ್ರಿ ವಿಷಕಾರಿ ರಾಸಾಯನಿಕ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ , ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಲಾರಿ ಚಾಲಕ ಪುಟ್ಟರಾಜು, ಪರಮೇಶ್, ಪ್ರಮೋದ ಮೃತರು.

ಮೈಸೂರಿನಿಂದ ಹಾಸನದ ಹಿಮತ್ ಸಿಂಗ್ ಬಟ್ಟೆ ಕಾರ್ಖಾನೆಗೆ ವಿಷಕಾರಿ ಪೌಡರ್ ಚೀಲಗಳು, ಕೆಮಿಕಲ್ ಬಾಕ್ಸ್ ಗಳನ್ನು ಹೊತ್ತು ತರುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಮಗುಚಿದೆ.

ಲಾರಿ ಬೆಂಕಿ ಹೊತ್ತಿ ಉರಿದಿದೆ. ಲಾರಿಯಡಿ ಸಿಲುಕಿ ಪ್ರಮೋದ್, ಪರಮೇಶ್ ಸ್ಥಳದಲ್ಲೇ ಮೃತಪಟ್ಟರೆ, ಪುಟ್ಟರಾಜು ಆಸ್ಪತ್ರೆಯಲ್ಲಿ ಅಸುನೀಗಿದರು. ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT