ಘಟನೆಯಲ್ಲಿ ಏರ್ ಪಿಸ್ತೂಲ್ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದ್ದು, ತನಿಖೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳ ಬಳಿ ಪಿಸ್ತೂಲ್ ಹೇಗೆ ಬಂತು ಎನ್ನುವ ವಿಷಯದಲ್ಲೂ ತನಿಖೆ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.