<p><strong>ಬೆಂಗಳೂರು</strong>: ಬಾಂಗ್ಲಾ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬೆಳಿಗ್ಗೆ ಬಂಧಿಸಿದ್ದಾರೆ.</p>.<p>ಸೊಬೂಜ್ (30) ಬಂಧಿತ ಆರೋಪಿ. ‘ಈತನೂ ಯುವತಿ ಮೇಲೆ ದೌರ್ಜನ್ಯ ನಡೆಸಿದ್ದ. ಘಟನೆ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಆವಲಹಳ್ಳಿ ಸಮೀಪದ ರಾಂಪುರ ಕೆರೆಯ ಬಳಿ ಕಸ ಆಯುವವರ ಶೆಡ್ನಲ್ಲಿ ಸೊಬೂಜ್ ತಂಗಿರುವ ಮಾಹಿತಿಯನ್ನು ಪೊಲೀಸರುಕಲೆಹಾಕಿದ್ದರು. ಆರೋಪಿಯನ್ನು ಬಂಧಿಸಿ ಜೀಪ್ನಲ್ಲಿ ಕರೆತರುತ್ತಿದ್ದಾಗ, ಮೂತ್ರ ವಿಸರ್ಜನೆ ಮಾಡಬೇಕೆಂದು ಕೇಳಿಕೊಂಡಿದ್ದ.ಪೊಲೀಸರು ಅದನ್ನು ನಂಬಿ ಆರೋಪಿಯನ್ನು ಜೀಪಿನಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ’.</p>.<p>‘ಶರಣಾಗುವಂತೆ ಪೊಲೀಸರು ತಿಳಿಸಿದರೂ ಅದಕ್ಕೆ ಒಪ್ಪದ ಆರೋಪಿ, ಪೊಲೀಸ್ ಸಿಬ್ಬಂದಿ ಮೇಲೆಚಾಕುವಿನಿಂದ ಹಲ್ಲೆ ನಡೆಸಿದ. ಈ ವೇಳೆ ಪಿಎಸ್ಐ ಶಿವರಾಜ್ ಹಾಗೂ ಹೆಡ್ ಕಾನ್ಸ್ಟೆಬಲ್ ದೇವೇಂದ್ರ ನಾಯಕ್ ಗಾಯಗೊಂಡರು. ಶಿವರಾಜ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದರು’ ಎಂದು ಮಾಹಿತಿ ನೀಡಿದರು.</p>.<p>ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ದಂಪತಿ ಸೇರಿ ನಾಲ್ವರು ಚೆನ್ನೈನಲ್ಲಿ ಪೊಲೀಸರಿಗೆ ಇತ್ತೀಚೆಗಷ್ಟೇ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಂಗ್ಲಾ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬೆಳಿಗ್ಗೆ ಬಂಧಿಸಿದ್ದಾರೆ.</p>.<p>ಸೊಬೂಜ್ (30) ಬಂಧಿತ ಆರೋಪಿ. ‘ಈತನೂ ಯುವತಿ ಮೇಲೆ ದೌರ್ಜನ್ಯ ನಡೆಸಿದ್ದ. ಘಟನೆ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಆವಲಹಳ್ಳಿ ಸಮೀಪದ ರಾಂಪುರ ಕೆರೆಯ ಬಳಿ ಕಸ ಆಯುವವರ ಶೆಡ್ನಲ್ಲಿ ಸೊಬೂಜ್ ತಂಗಿರುವ ಮಾಹಿತಿಯನ್ನು ಪೊಲೀಸರುಕಲೆಹಾಕಿದ್ದರು. ಆರೋಪಿಯನ್ನು ಬಂಧಿಸಿ ಜೀಪ್ನಲ್ಲಿ ಕರೆತರುತ್ತಿದ್ದಾಗ, ಮೂತ್ರ ವಿಸರ್ಜನೆ ಮಾಡಬೇಕೆಂದು ಕೇಳಿಕೊಂಡಿದ್ದ.ಪೊಲೀಸರು ಅದನ್ನು ನಂಬಿ ಆರೋಪಿಯನ್ನು ಜೀಪಿನಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ’.</p>.<p>‘ಶರಣಾಗುವಂತೆ ಪೊಲೀಸರು ತಿಳಿಸಿದರೂ ಅದಕ್ಕೆ ಒಪ್ಪದ ಆರೋಪಿ, ಪೊಲೀಸ್ ಸಿಬ್ಬಂದಿ ಮೇಲೆಚಾಕುವಿನಿಂದ ಹಲ್ಲೆ ನಡೆಸಿದ. ಈ ವೇಳೆ ಪಿಎಸ್ಐ ಶಿವರಾಜ್ ಹಾಗೂ ಹೆಡ್ ಕಾನ್ಸ್ಟೆಬಲ್ ದೇವೇಂದ್ರ ನಾಯಕ್ ಗಾಯಗೊಂಡರು. ಶಿವರಾಜ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದರು’ ಎಂದು ಮಾಹಿತಿ ನೀಡಿದರು.</p>.<p>ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ದಂಪತಿ ಸೇರಿ ನಾಲ್ವರು ಚೆನ್ನೈನಲ್ಲಿ ಪೊಲೀಸರಿಗೆ ಇತ್ತೀಚೆಗಷ್ಟೇ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>