ಬೆಂಗಳೂರು:ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಹೆಣ್ಣೂರು ಠಾಣೆಯ ಪಿಎಸ್ಐ ನಿಂಗರಾಜ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ರೌಡಿ ರಘು (30) ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
‘ಕೆಲ ದಿನಗಳ ಹಿಂದೆ ನಾಗವಾರ ವರ್ತುಲ ರಸ್ತೆಯ ಸರ್ವಿಸ್ ರಸ್ತೆ ಬಳಿ ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಎಂಬುವರ ಹತ್ಯೆ ನಡೆದಿತ್ತು. ಈ ಸಂಬಂಧ ಆರು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಿಳ್ಳಾರೆಡ್ಡಿ ನಗರದ ನಿವಾಸಿ ರಘು, ಕೃತ್ಯಕ್ಕೆ ಬಳಸಿದ್ದ ಮಚ್ಚನ್ನು ಕಸ್ತೂರಿನಗರದ ರೈಲ್ವೆ ಪ್ಯಾರಲ್ ರಸ್ತೆ ಬದಿಯ ಪೊದೆಯಲ್ಲಿ ಬಿಸಾಡಿದ್ದಾಗಿ ತಿಳಿಸಿದ್ದ. ಹೀಗಾಗಿ ಆತನನ್ನು ಮಂಗಳವಾರ ಬೆಳಿಗ್ಗೆ ವಾಹನದಲ್ಲಿ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.