<p><strong>ಶಿರಸಿ: </strong>ರಾಜ್ಯದಲ್ಲಿ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ನಗರಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದರು.</p>.<p>'ಬಜೆಟ್ ನಲ್ಲಿ ಇದಕ್ಕಾಗಿ ಅನುದಾನ ಘೋಷಿಸಲಾಗುವುದು. ತೋಟಗಾರಿಕೆ, ಅರಣ್ಯ ಕಾಲೇಜು ಇಲ್ಲಿದೆ. ಇವುಗಳನ್ನು ವಿಲೀನಗೊಳಿಸಿ ವನ್ಯಜೀವಿ ರಕ್ಷಣೆ, ಪರಿಸರ ಸಂರಕ್ಷಣೆ, ಕೃಷಿ ಸೇರಿದಂತೆ ಪರಿಸರ ಪೂರಕ ಅಧ್ಯಯನಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯ ಸ್ಥಾಪನೆ ಭರವಸೆ ನೀಡಿದರು.</p>.<p>'ಅರಣ್ಯ ಭೂಮಿ ಹೆಚ್ಚಿರುವ ಉತ್ತರ ಕನ್ನಡದಲ್ಲಿ ಪರಿಸರ ರಕ್ಷಣೆ ಜತೆಗೆ ಅಭಿವೃದ್ಧಿ ಕೈಗೊಳ್ಳುವ ಸವಾಲು ಇದೆ. ಕಳಚೆ ಗ್ರಾಮದಲ್ಲಿ ಭೂಕುಸಿತ ಉಂಟಾಗದಂತೆ ಕ್ರಮವಹಿಸಲಾಗುವುದು. ಅರಣ್ಯ ಮರು ನಿರ್ಮಾಣ ಮಾಡಲಾಗುವುದು. ಪುನರ್ವಸತಿಗೆ ಹೆಚ್ಚಿನ ಅನುದಾನ ಕೊಡಲಾಗುವುದು' ಎಂದು ಭರವಸೆ ನೀಡಿದರು.</p>.<p>'ರಣ್ಯವಾಸಿಗಳಿಗೆ ಒಂದೇ ತಲೆಮಾರಿನ ದಾಖಲೆ ಪಡೆದು ಮಂಜೂರು ನೀಡುವಂತೆ ಸುಪ್ರಿಂಕೋರ್ಟ್ ಗೆ ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸಲಾಗಿದೆ' ಎಂದರು.</p>.<p>'ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಾಡದು. ಸುಪ್ರಿಂಕೋರ್ಟ್ ನಿರ್ಣಯ ಬರುವವರೆಗೂ ಅತಿಕ್ರಮಣದಾರರಿಗೆ ತೊಂದರೆ ನೀಡದಂತೆ ಅರಣ್ಯ ಇಲಾಖೆಗೂ ಸೂಚಿಸಲಾಗಿದೆ' ಎಂದರು.</p>.<p>'ಶಿರಸಿ ಜಿಲ್ಲೆ ಅಗತ್ಯತೆ ಬಗ್ಗೆ ಮನವರಿಕೆ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಬೇಡಿಕೆ ಇದೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು' ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ ಹೆಬ್ಬಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಸಿ.ಪಾಟೀಲ್, ಶಾಸಕರಾದ ಸುನೀಲ ನಾಯ್ಕ, ಶಾಂತಾರಾಮ ಸಿದ್ಧಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ರಾಜ್ಯದಲ್ಲಿ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ನಗರಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದರು.</p>.<p>'ಬಜೆಟ್ ನಲ್ಲಿ ಇದಕ್ಕಾಗಿ ಅನುದಾನ ಘೋಷಿಸಲಾಗುವುದು. ತೋಟಗಾರಿಕೆ, ಅರಣ್ಯ ಕಾಲೇಜು ಇಲ್ಲಿದೆ. ಇವುಗಳನ್ನು ವಿಲೀನಗೊಳಿಸಿ ವನ್ಯಜೀವಿ ರಕ್ಷಣೆ, ಪರಿಸರ ಸಂರಕ್ಷಣೆ, ಕೃಷಿ ಸೇರಿದಂತೆ ಪರಿಸರ ಪೂರಕ ಅಧ್ಯಯನಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯ ಸ್ಥಾಪನೆ ಭರವಸೆ ನೀಡಿದರು.</p>.<p>'ಅರಣ್ಯ ಭೂಮಿ ಹೆಚ್ಚಿರುವ ಉತ್ತರ ಕನ್ನಡದಲ್ಲಿ ಪರಿಸರ ರಕ್ಷಣೆ ಜತೆಗೆ ಅಭಿವೃದ್ಧಿ ಕೈಗೊಳ್ಳುವ ಸವಾಲು ಇದೆ. ಕಳಚೆ ಗ್ರಾಮದಲ್ಲಿ ಭೂಕುಸಿತ ಉಂಟಾಗದಂತೆ ಕ್ರಮವಹಿಸಲಾಗುವುದು. ಅರಣ್ಯ ಮರು ನಿರ್ಮಾಣ ಮಾಡಲಾಗುವುದು. ಪುನರ್ವಸತಿಗೆ ಹೆಚ್ಚಿನ ಅನುದಾನ ಕೊಡಲಾಗುವುದು' ಎಂದು ಭರವಸೆ ನೀಡಿದರು.</p>.<p>'ರಣ್ಯವಾಸಿಗಳಿಗೆ ಒಂದೇ ತಲೆಮಾರಿನ ದಾಖಲೆ ಪಡೆದು ಮಂಜೂರು ನೀಡುವಂತೆ ಸುಪ್ರಿಂಕೋರ್ಟ್ ಗೆ ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸಲಾಗಿದೆ' ಎಂದರು.</p>.<p>'ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಾಡದು. ಸುಪ್ರಿಂಕೋರ್ಟ್ ನಿರ್ಣಯ ಬರುವವರೆಗೂ ಅತಿಕ್ರಮಣದಾರರಿಗೆ ತೊಂದರೆ ನೀಡದಂತೆ ಅರಣ್ಯ ಇಲಾಖೆಗೂ ಸೂಚಿಸಲಾಗಿದೆ' ಎಂದರು.</p>.<p>'ಶಿರಸಿ ಜಿಲ್ಲೆ ಅಗತ್ಯತೆ ಬಗ್ಗೆ ಮನವರಿಕೆ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಬೇಡಿಕೆ ಇದೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು' ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ ಹೆಬ್ಬಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಸಿ.ಪಾಟೀಲ್, ಶಾಸಕರಾದ ಸುನೀಲ ನಾಯ್ಕ, ಶಾಂತಾರಾಮ ಸಿದ್ಧಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>