2018ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಎಚ್.ಆರ್.ಮಹಾದೇವ ಅವರು ಮಕ್ಕಳ ಹಕ್ಕು ಸಂರಕ್ಷಣಾ ಸಮಿತಿ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ‘ಹೆಣ್ಣು ಮಗು ವೃತ್ತ’ ನಿರ್ಮಿಸಲು ತೀರ್ಮಾನಿಸಿದ್ದರು. ನಂತರ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ ವೃತ್ತ ನಿರ್ಮಾಣ ಮಾಡಿಸಿದ್ದರು. ವೃತ್ತದ ಸುತ್ತಲೂ ‘ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ’ ಎಂದು ಕನ್ನಡ, ಹಿಂದಿ ಭಾಷೆಯಲ್ಲಿ ಬರೆಸಲಾಗಿದೆ.