<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): </strong>ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಆಚರಿಸಲು ನಿರ್ಧರಿಸಿರುವ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆಗಳು ನಡೆದಿವೆ. ಅ. 23, 24 ಹಾಗೂ 25ರಂದು ರಾಣಿ ಚನ್ನಮ್ಮನ ಕರ್ಮಭೂಮಿಯಲ್ಲಿ ‘ವಿಜಯ ವೈಭವ’ ಮನೆ ಮಾಡಲಿದೆ.</p>.<p>1824ರ ಅಕ್ಟೋಬರ್ 23ರಂದು ಕಿತ್ತೂರು ಸೈನ್ಯವು ಬ್ರಿಟಿಷ್ ಸೈನ್ಯದ ವಿರುದ್ಧ ಸಾಧಿಸಿದ ವಿಜಯದ ನೆನಪಿನ ಉತ್ಸವವಿದು. 198 ವರ್ಷಗಳ ನಂತರ ಇದಕ್ಕೆ ರಾಜ್ಯಮಟ್ಟದ ಮಾನ್ಯತೆ ಸಿಕ್ಕಿದೆ. ಕಿತ್ತೂರು ಕರ್ನಾಟಕ ಭಾಗದ ಜನರ ಭಾವನಾತ್ಮಕ,ಸ್ವಾಭಿಮಾನದ ಪ್ರತೀಕವಾದ ಉತ್ಸವ ನಡೆಯುತ್ತಿದೆ.</p>.<p>ರಾಣಿ ಚನ್ನಮ್ಮ ವೇದಿಕೆಯಲ್ಲಿ ಮುಖ್ಯ ಕಾರ್ಯಕ್ರಮ, ರಾಜಾ ಮಲ್ಲಸರ್ಜ ವೇದಿಕೆ ಹಾಗೂ ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಲಾಗಿದೆ. ಮಳೆಯಿಂದ ತೊಂದರೆಯಾಗದಂತೆ ಶಾಮಿಯಾನ ಹಾಕಲಾಗಿದೆ.</p>.<p>ಭಾನುವಾರ ಬೆಳಿಗ್ಗೆ 10.30ಕ್ಕೆ ಆನೆಯ ಮೇಲೆ ಚನ್ನಮ್ಮನ ವೀರಜ್ಯೋತಿ ಯಾತ್ರೆ, ಕುದುರೆಗಳ ಸಾಲು, ವಾದ್ಯಮೇಳಗಳ ಸಮೇತ ರೂಪಕಗಳ ಮೆರವಣಿಗೆ ನಡೆಯಲಿದೆ. ಶನಿವಾರವೇ ಹಲವು ಕಲಾತಂಡಗಳು ಮೇಳೈಸಿವೆ. ಫಲ–ಪುಷ್ಪ ಪ್ರದರ್ಶನ, ಕೈಗಾರಿಕಾ ವಸ್ತು ಪ್ರದರ್ಶನ, ಐತಿಹಾಸಿಕ ವಸ್ತು ಪ್ರದರ್ಶನ, ಶ್ವಾನಗಳ ಪ್ರದರ್ಶನ ಈ ಬಾರಿಯ ಆಕರ್ಷಣೆ. ಸಂಜೆ 7ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು. ಅ.24ರಂದು ‘ಮಹಿಳಾ ಉತ್ಸವ’ ಆಚರಿಸಲಾಗುವುದು. ಸಮಾನಾಂತರ ವೇದಿಕೆಗಳಲ್ಲಿ ಪ್ರತಿ ದಿನ 40 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): </strong>ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಆಚರಿಸಲು ನಿರ್ಧರಿಸಿರುವ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆಗಳು ನಡೆದಿವೆ. ಅ. 23, 24 ಹಾಗೂ 25ರಂದು ರಾಣಿ ಚನ್ನಮ್ಮನ ಕರ್ಮಭೂಮಿಯಲ್ಲಿ ‘ವಿಜಯ ವೈಭವ’ ಮನೆ ಮಾಡಲಿದೆ.</p>.<p>1824ರ ಅಕ್ಟೋಬರ್ 23ರಂದು ಕಿತ್ತೂರು ಸೈನ್ಯವು ಬ್ರಿಟಿಷ್ ಸೈನ್ಯದ ವಿರುದ್ಧ ಸಾಧಿಸಿದ ವಿಜಯದ ನೆನಪಿನ ಉತ್ಸವವಿದು. 198 ವರ್ಷಗಳ ನಂತರ ಇದಕ್ಕೆ ರಾಜ್ಯಮಟ್ಟದ ಮಾನ್ಯತೆ ಸಿಕ್ಕಿದೆ. ಕಿತ್ತೂರು ಕರ್ನಾಟಕ ಭಾಗದ ಜನರ ಭಾವನಾತ್ಮಕ,ಸ್ವಾಭಿಮಾನದ ಪ್ರತೀಕವಾದ ಉತ್ಸವ ನಡೆಯುತ್ತಿದೆ.</p>.<p>ರಾಣಿ ಚನ್ನಮ್ಮ ವೇದಿಕೆಯಲ್ಲಿ ಮುಖ್ಯ ಕಾರ್ಯಕ್ರಮ, ರಾಜಾ ಮಲ್ಲಸರ್ಜ ವೇದಿಕೆ ಹಾಗೂ ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಲಾಗಿದೆ. ಮಳೆಯಿಂದ ತೊಂದರೆಯಾಗದಂತೆ ಶಾಮಿಯಾನ ಹಾಕಲಾಗಿದೆ.</p>.<p>ಭಾನುವಾರ ಬೆಳಿಗ್ಗೆ 10.30ಕ್ಕೆ ಆನೆಯ ಮೇಲೆ ಚನ್ನಮ್ಮನ ವೀರಜ್ಯೋತಿ ಯಾತ್ರೆ, ಕುದುರೆಗಳ ಸಾಲು, ವಾದ್ಯಮೇಳಗಳ ಸಮೇತ ರೂಪಕಗಳ ಮೆರವಣಿಗೆ ನಡೆಯಲಿದೆ. ಶನಿವಾರವೇ ಹಲವು ಕಲಾತಂಡಗಳು ಮೇಳೈಸಿವೆ. ಫಲ–ಪುಷ್ಪ ಪ್ರದರ್ಶನ, ಕೈಗಾರಿಕಾ ವಸ್ತು ಪ್ರದರ್ಶನ, ಐತಿಹಾಸಿಕ ವಸ್ತು ಪ್ರದರ್ಶನ, ಶ್ವಾನಗಳ ಪ್ರದರ್ಶನ ಈ ಬಾರಿಯ ಆಕರ್ಷಣೆ. ಸಂಜೆ 7ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು. ಅ.24ರಂದು ‘ಮಹಿಳಾ ಉತ್ಸವ’ ಆಚರಿಸಲಾಗುವುದು. ಸಮಾನಾಂತರ ವೇದಿಕೆಗಳಲ್ಲಿ ಪ್ರತಿ ದಿನ 40 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>