<p><strong>ಉಳ್ಳಾಲ:</strong> ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಭಾನುವಾರ ತಡರಾತ್ರಿ ಬಿರುಗಾಳಿಗೆ ಸಿಲುಕಿದ್ದು, ಬೋಟ್ನ ಡಿಂಗಿ (ಪಾತಿ)ಯ ಜೊತೆಗೆ ನಾಪತ್ತೆಯಾಗಿದ್ದ ಮೀನುಗಾರ, ಉಳ್ಳಾಲ ಹೊಯ್ಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೊ 36 ಗಂಟೆಗಳ ನಂತರ ಮಂಗಳವಾರ ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ.</p>.<p>ಪರ್ಸಿನ್ ಬೋಟ್ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಭಾನುವಾರ ಬೆಳಿಗ್ಗೆ 11.30ಕ್ಕೆ ಬೋಟ್ನ ಬೆಲ್ಟ್ ತುಂಡಾಗಿದ್ದು, ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿಯವರೆಗೆ ಬಲೆ ಬಿಡಿಸುವ ಕಾರ್ಯದಲ್ಲಿ ತೊಡಗಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಗಾಳಿ– ಮಳೆ ಹೆಚ್ಚಾಗಿದ್ದು, ಬೋಟ್ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.</p>.<p>ಸುನಿಲ್ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಬೋಟ್ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಅವರನ್ನು ಸಮುದ್ರದಲ್ಲಿ ಹುಡುಕಾಡಿದ್ದು, ರಾತ್ರಿ ಉಳ್ಳಾಲದಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಸುನಿಲ್ ಕುವೆಲ್ಲೊ ಸತತ 36 ಗಂಟೆಗಳವರೆಗೆ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ, ಮಲ್ಪೆಗೆ ಬಂದು ಸೇರಿದ್ದರು. ಅಲ್ಲಿ ಅವರನ್ನು ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಭಾನುವಾರ ತಡರಾತ್ರಿ ಬಿರುಗಾಳಿಗೆ ಸಿಲುಕಿದ್ದು, ಬೋಟ್ನ ಡಿಂಗಿ (ಪಾತಿ)ಯ ಜೊತೆಗೆ ನಾಪತ್ತೆಯಾಗಿದ್ದ ಮೀನುಗಾರ, ಉಳ್ಳಾಲ ಹೊಯ್ಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೊ 36 ಗಂಟೆಗಳ ನಂತರ ಮಂಗಳವಾರ ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ.</p>.<p>ಪರ್ಸಿನ್ ಬೋಟ್ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಭಾನುವಾರ ಬೆಳಿಗ್ಗೆ 11.30ಕ್ಕೆ ಬೋಟ್ನ ಬೆಲ್ಟ್ ತುಂಡಾಗಿದ್ದು, ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿಯವರೆಗೆ ಬಲೆ ಬಿಡಿಸುವ ಕಾರ್ಯದಲ್ಲಿ ತೊಡಗಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಗಾಳಿ– ಮಳೆ ಹೆಚ್ಚಾಗಿದ್ದು, ಬೋಟ್ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.</p>.<p>ಸುನಿಲ್ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಬೋಟ್ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಅವರನ್ನು ಸಮುದ್ರದಲ್ಲಿ ಹುಡುಕಾಡಿದ್ದು, ರಾತ್ರಿ ಉಳ್ಳಾಲದಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಸುನಿಲ್ ಕುವೆಲ್ಲೊ ಸತತ 36 ಗಂಟೆಗಳವರೆಗೆ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ, ಮಲ್ಪೆಗೆ ಬಂದು ಸೇರಿದ್ದರು. ಅಲ್ಲಿ ಅವರನ್ನು ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>