ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

Last Updated 10 ಆಗಸ್ಟ್ 2021, 17:48 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 15ರಂದು ರಾಜ್ಯದ 28 ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಚಾಮರಾಜನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಬೇಕು ಎಂದು ಸೂಚಿಸಿದ್ದಾರೆ. 28 ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಪಟ್ಟಿ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸುವರು.

ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್‌. ಅಶೋಕ ಮಾತ್ರ ಯಾವುದೇ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT