<p><strong>ಬೆಂಗಳೂರು: </strong>ಕೃಷ್ಣಾ ನದಿ ಪಾತ್ರದಲ್ಲಿ ನಿರಂತರ ಪ್ರವಾಹಕ್ಕೆ ತುತ್ತಾಗುವ 100 ಗ್ರಾಮಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡುವ ಕೇಂದ್ರೀಕೃತ ಮಾಹಿತಿ ಪ್ರಸಾರ ವ್ಯವಸ್ಥೆಯನ್ನು ಪೈಲಟ್ ಯೋಜನೆಯಾಗಿ ಕೈಗೆತ್ತಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಹೇಳಿದರು.</p>.<p>‘ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಜಾರಿ ಮಾಡಲಾಗಿದೆ. ಬೆಂಗಳೂರಿನಿಂದಲೇ ಈ ವ್ಯವಸ್ಥೆ ನಿಯಂತ್ರಿಸಲಾಗುತ್ತದೆ. ಇದರ ಜಾರಿಗೆ ₹95 ಲಕ್ಷ ಖರ್ಚಾಗಿದೆ’ ಎಂದು ತಿಳಿಸಿದರು.</p>.<p>ಈಗಾಗಲೇ ಯೋಜನೆ ಜಾರಿಯಾಗಿದ್ದು, ಗ್ರಾಮಸ್ಥರಿಗೆ ಹವಾಮಾನ ಮಾಹಿತಿಯಲ್ಲದೆ, ಗುಡುಗು, ಮಿಂಚು, ಪ್ರವಾಹ, ಭೂಕುಸಿತ ಮತ್ತು ಇತರ ತುರ್ತು ಸನ್ನಿವೇಶಗಳ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗುತ್ತದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಯೋಜನೆಯನ್ನು ಜಾರಿ ಮಾಡಿದ್ದು, ನಿರ್ವಹಣೆಯನ್ನೂ ಮಾಡುತ್ತಿದೆ.</p>.<p>ಈ ಯೋಜನೆಯನ್ನು ಮೊದಲ ಹಂತದಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಆರಂಭಿಸಲಾಗಿದೆ. ಈ ಪ್ರದೇಶವು ನಿರಂತರ ಪ್ರವಾಹಕ್ಕೆ ತುತ್ತಾಗುತ್ತಿರುವುದೇ ಮುಖ್ಯ ಕಾರಣ. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ತಲಾ ನಾಲ್ಕು ಸ್ಪೀಕರ್ಗಳನ್ನು ಅಳವಡಿಸಲಾಗಿದ್ದು, ಸಂದೇಶಗಳು ನಾಲ್ಕೂ ದಿಕ್ಕಿಗೆ ಕೇಳಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಮನೋಜ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೃಷ್ಣಾ ನದಿ ಪಾತ್ರದಲ್ಲಿ ನಿರಂತರ ಪ್ರವಾಹಕ್ಕೆ ತುತ್ತಾಗುವ 100 ಗ್ರಾಮಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡುವ ಕೇಂದ್ರೀಕೃತ ಮಾಹಿತಿ ಪ್ರಸಾರ ವ್ಯವಸ್ಥೆಯನ್ನು ಪೈಲಟ್ ಯೋಜನೆಯಾಗಿ ಕೈಗೆತ್ತಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಹೇಳಿದರು.</p>.<p>‘ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಜಾರಿ ಮಾಡಲಾಗಿದೆ. ಬೆಂಗಳೂರಿನಿಂದಲೇ ಈ ವ್ಯವಸ್ಥೆ ನಿಯಂತ್ರಿಸಲಾಗುತ್ತದೆ. ಇದರ ಜಾರಿಗೆ ₹95 ಲಕ್ಷ ಖರ್ಚಾಗಿದೆ’ ಎಂದು ತಿಳಿಸಿದರು.</p>.<p>ಈಗಾಗಲೇ ಯೋಜನೆ ಜಾರಿಯಾಗಿದ್ದು, ಗ್ರಾಮಸ್ಥರಿಗೆ ಹವಾಮಾನ ಮಾಹಿತಿಯಲ್ಲದೆ, ಗುಡುಗು, ಮಿಂಚು, ಪ್ರವಾಹ, ಭೂಕುಸಿತ ಮತ್ತು ಇತರ ತುರ್ತು ಸನ್ನಿವೇಶಗಳ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗುತ್ತದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಯೋಜನೆಯನ್ನು ಜಾರಿ ಮಾಡಿದ್ದು, ನಿರ್ವಹಣೆಯನ್ನೂ ಮಾಡುತ್ತಿದೆ.</p>.<p>ಈ ಯೋಜನೆಯನ್ನು ಮೊದಲ ಹಂತದಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಆರಂಭಿಸಲಾಗಿದೆ. ಈ ಪ್ರದೇಶವು ನಿರಂತರ ಪ್ರವಾಹಕ್ಕೆ ತುತ್ತಾಗುತ್ತಿರುವುದೇ ಮುಖ್ಯ ಕಾರಣ. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ತಲಾ ನಾಲ್ಕು ಸ್ಪೀಕರ್ಗಳನ್ನು ಅಳವಡಿಸಲಾಗಿದ್ದು, ಸಂದೇಶಗಳು ನಾಲ್ಕೂ ದಿಕ್ಕಿಗೆ ಕೇಳಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಮನೋಜ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>