<p><strong>ರಾಯಚೂರು/ಯಾದಗಿರಿ:</strong> ಕೃಷ್ಣಾನದಿಯಲ್ಲಿ ಪ್ರವಾಹ ಮಟ್ಟ ಯಥಾಸ್ಥಿತಿಯಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಮತ್ತು ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆಗಳು ವಾರದಿಂದ ಮುಳುಗಡೆಯಾಗಿವೆ.</p>.<p>ಯಾದಗಿರಿ ಜಿಲ್ಲೆಯ ನದಿ ತೀರದಲ್ಲಿಯ ಭತ್ತದ ಗದ್ದೆಗಳಲ್ಲಿ ಒಡ್ಡುಗಳು ಮಾತ್ರ ಕಾಣುತ್ತಿವೆ. ಬೆಳೆ ಕೊಳೆತು ನಾಶವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.ವಡಗೇರಾ ತಾಲ್ಲೂಕಿನ ಕದರಾಪುರ ಗ್ರಾಮದ ಮೀನುಗಾರರ 33 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.</p>.<p class="Subhead"><strong>ನೀರಿನ ಪ್ರಮಾಣದಲ್ಲಿ ಇಳಿಕೆ (ಬೆಳಗಾವಿ ವರದಿ): </strong>ಕೆಲವು ದಿನಗಳಿಂದ ಮಹಾರಾಷ್ಟ್ರ ಮತ್ತು ಗಡಿ ಭಾಗದಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಆ ರಾಜ್ಯದಿಂದ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣದಲ್ಲೂ ಇಳಿಕೆಯಾಗಿದೆ.</p>.<p>ಮಹಾರಾಷ್ಟ್ರದ ಕಡೆಯಿಂದ 2.85 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಶುಕ್ರವಾರ 3.04 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿತ್ತು. ಮುಳುಗಡೆ ಸ್ಥಿತಿಯಲ್ಲಿರುವ ಚಿಕ್ಕೋಡಿ ಭಾಗದ 9 ಸೇತುವೆಗಳಲ್ಲಿ ಕೆಲವು ಸೇತುವೆಗಳು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲ್ಲೂಕುಗಳ ನದಿ ತೀರದ ಗ್ರಾಮಗಳು ಜಲಾವೃತ ಸ್ಥಿತಿಯಲ್ಲೇ ಇವೆ.</p>.<p class="Subhead"><strong>ತಗ್ಗಿದ ಮಳೆ: </strong>ಶಿವಮೊಗ್ಗ ಜಿಲ್ಲೆಯಲ್ಲಿಸಾಧಾರಣ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ ಒಟ್ಟು15.37 ಮಿ.ಮೀ. ಮಳೆಯಾಗಿದೆ. ಹೊಸನಗರದಲ್ಲಿ 28.80 ಮಿ.ಮೀ, ತೀರ್ಥಹಳ್ಳಿಯಲ್ಲಿ 45.40 ಮಿ.ಮೀ, ಸಾಗರದಲ್ಲಿ 18.60 ಮಿ.ಮೀ, ಸೊರಬದಲ್ಲಿ 2.40 ಮಿ.ಮೀ, ಶಿವಮೊಗ್ಗದಲ್ಲಿ 9.80 ಮಿ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು/ಯಾದಗಿರಿ:</strong> ಕೃಷ್ಣಾನದಿಯಲ್ಲಿ ಪ್ರವಾಹ ಮಟ್ಟ ಯಥಾಸ್ಥಿತಿಯಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಮತ್ತು ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆಗಳು ವಾರದಿಂದ ಮುಳುಗಡೆಯಾಗಿವೆ.</p>.<p>ಯಾದಗಿರಿ ಜಿಲ್ಲೆಯ ನದಿ ತೀರದಲ್ಲಿಯ ಭತ್ತದ ಗದ್ದೆಗಳಲ್ಲಿ ಒಡ್ಡುಗಳು ಮಾತ್ರ ಕಾಣುತ್ತಿವೆ. ಬೆಳೆ ಕೊಳೆತು ನಾಶವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.ವಡಗೇರಾ ತಾಲ್ಲೂಕಿನ ಕದರಾಪುರ ಗ್ರಾಮದ ಮೀನುಗಾರರ 33 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.</p>.<p class="Subhead"><strong>ನೀರಿನ ಪ್ರಮಾಣದಲ್ಲಿ ಇಳಿಕೆ (ಬೆಳಗಾವಿ ವರದಿ): </strong>ಕೆಲವು ದಿನಗಳಿಂದ ಮಹಾರಾಷ್ಟ್ರ ಮತ್ತು ಗಡಿ ಭಾಗದಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಆ ರಾಜ್ಯದಿಂದ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣದಲ್ಲೂ ಇಳಿಕೆಯಾಗಿದೆ.</p>.<p>ಮಹಾರಾಷ್ಟ್ರದ ಕಡೆಯಿಂದ 2.85 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಶುಕ್ರವಾರ 3.04 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿತ್ತು. ಮುಳುಗಡೆ ಸ್ಥಿತಿಯಲ್ಲಿರುವ ಚಿಕ್ಕೋಡಿ ಭಾಗದ 9 ಸೇತುವೆಗಳಲ್ಲಿ ಕೆಲವು ಸೇತುವೆಗಳು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲ್ಲೂಕುಗಳ ನದಿ ತೀರದ ಗ್ರಾಮಗಳು ಜಲಾವೃತ ಸ್ಥಿತಿಯಲ್ಲೇ ಇವೆ.</p>.<p class="Subhead"><strong>ತಗ್ಗಿದ ಮಳೆ: </strong>ಶಿವಮೊಗ್ಗ ಜಿಲ್ಲೆಯಲ್ಲಿಸಾಧಾರಣ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ ಒಟ್ಟು15.37 ಮಿ.ಮೀ. ಮಳೆಯಾಗಿದೆ. ಹೊಸನಗರದಲ್ಲಿ 28.80 ಮಿ.ಮೀ, ತೀರ್ಥಹಳ್ಳಿಯಲ್ಲಿ 45.40 ಮಿ.ಮೀ, ಸಾಗರದಲ್ಲಿ 18.60 ಮಿ.ಮೀ, ಸೊರಬದಲ್ಲಿ 2.40 ಮಿ.ಮೀ, ಶಿವಮೊಗ್ಗದಲ್ಲಿ 9.80 ಮಿ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>