‘ತಂಡವು ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ, ಯರನಾಳ, ಹೊಸೂರ ಹಾಗೂ ಇಂಗಳಿ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆ ಹಾನಿ ಪರಿಶೀಲಿಸಲಿದೆ. ಅಲ್ಲಿಂದ ಗೋಕಾಕ ತಾಲ್ಲೂಕಿನ ಮಸಗುಪ್ಪಿ, ತಿಗಡಿ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆಹಾನಿ ಹಾಗೂ ಲೋಳಸೂರ ಸೇತುವೆ ವೀಕ್ಷಿಸಲಿದೆ. ನಂತರ ಸವದತ್ತಿ ತಾಲ್ಲೂಕಿಗೆ ತೆರಳಲಿದೆ. ಅಲ್ಲಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಇನಾಂಹೊಂಗಲ ಮಾರ್ಗವಾಗಿ ಧಾರವಾಡ ಜಿಲ್ಲೆಗೆ ತೆರಳಲಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.