ಕಳೆದ ನಾಲ್ಕು ದಿನಗಳಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದ್ದರಿಂದ ನದಿ ಪಾತ್ರದ ಸೊನ್ನ, ಕೊಳ್ಳೂರ, ಅಳ್ಳಗಿ, ಹಿಂಚಗೇರಾ ಸೇರಿದಂತೆ ನಾಲ್ಕೈದು ಗ್ರಾಮಗಳ ಸುಮಾರು 600ಕ್ಕೂ ಅಧಿಕ ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳನ್ನು ತಾಲ್ಲೂಕು ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪ್ರತ್ಯೇಕವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯು ನಿರ್ವಹಣೆ ಮಾಡುತ್ತಿರುವ ಹಿಂಚಗೇರಾ ಹಾಗೂ ಕೊಳ್ಳೂರು ಗ್ರಾಮಗಳ ಜನರಿಗೆ ಅದರಲ್ಲೂ ದಲಿತ ಸಮುದಾಯಕ್ಕೆ ಸೇರಿದವರಿಗೆ ಸಕಾಲಕ್ಕೆ ಆಹಾರ, ಕುಡಿಯುವ ನೀರು, ಮಕ್ಕಳಿಗೆ ಹಾಲು, ಬಿಸ್ಕಟ್, ಬಾಣಂತಿಯರಿಗೆ ಬಿಸಿ ನೀರು ನೀಡುತ್ತಿಲ್ಲ ಎಂದು ಗ್ರಾಮದಹರಿಜನ ವಾಡಾದ ಮಹಿಳೆಯರು ದೂರಿದರು.