ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರ ಡುವ ಸಾಧ್ಯತೆ ಹೆಚ್ಚಿದೆ. ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸಲು, ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗೆ ಎಲ್ಲ ಹಂತದ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಾಂಕ್ರಾಮಿಕ ನಿರ್ವಹಣೆಗೆ ಸಮಗ್ರ ಕ್ರಿಯಾ ಯೋಜನೆ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರಬೇಕು. ಮಾನವ ಸಂಪನ್ಮೂಲ, ಪರೀಕ್ಷೆಯ ಕಿಟ್, ಔಷಧಗಳು, ರಾಸಾ ಯನಿಕಗಳು ಹಾಗೂ ಉಪಕರಣಗಳು ಅಗತ್ಯ ಪ್ರಮಾ ಣದಲ್ಲಿ ಇಟ್ಟುಕೊಳ್ಳಬೇಕು ಎಂದು ಇಲಾಖೆ ಹೇಳಿದೆ.