ಬೆಂಗಳೂರು: ಸರ್ಕಾರಿ ವಲಯದಲ್ಲಿ ಅವಕಾಶಗಳು ಕಡಿಮೆ ಆಗುತ್ತಿರುವುದರಿಂದ ಪರಿಶಿಷ್ಟರು, ಹಿಂದುಳಿದ ಸಮುದಾಯಗಳಿಗೆ ಸೇರಿದ ಬಿಪಿಎಲ್ ವರ್ಗದವರಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯಮದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದಕ್ಕೆ ಪೂರಕವಾಗಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.