‘ಆಹಾರ ಸರಬರಾಜಿನ ಪ್ರಾಮುಖ್ಯ ಅರಿತ ಸರ್ಕಾರ ಲಾಕ್ಡೌನ್ ಸಮಯದಲ್ಲಿ ಅಗತ್ಯ ಸೇವೆಯಡಿ ಆಹಾರ ತಲುಪಿಸುವುದಕ್ಕೆ ವಿಶೇಷ ಅವಕಾಶ ಕಲ್ಪಿಸಿದೆ. ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಲಕ್ಷಾಂತರ ಜನ ಆಹಾರ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆರ್ಥಿಕ ಸಮಸ್ಯೆ ಇರುವುದರಿಂದ ಈ ದುರಿತ ಕಾಲಘಟ್ಟದಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಒಕ್ಕೂಟದ ಅಧ್ಯಕ್ಷ ವಿನಯ್ ಸಾರಥಿ ತಿಳಿಸಿದರು.