ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲವಂತದ ಮತಾಂತರ ಆರೋಪ; ಇಬ್ಬರ ಬಂಧನ

Last Updated 11 ಡಿಸೆಂಬರ್ 2022, 14:21 IST
ಅಕ್ಷರ ಗಾತ್ರ

ಕಾರಟಗಿ (ಕೊಪ್ಪಳ ಜಿಲ್ಲೆ): ಆಮಿಷವೊಡ್ಡಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಭಾನುವಾರ ಬಂಧಿಸಲಾಗಿದೆ.

ವಿವಿಧ ಆಮಿಷ ತೋರಿಸಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು ಎನ್ನುವ ಆರೋಪದ ಮೇಲೆ ಶುಕ್ರವಾರ ಪಟ್ಟಣದ ರಾಮನಗರದ ಗ್ರೇಸ್ ಪ್ರಾರ್ಥನಾ ಮಂದಿರ ಪಾದ್ರಿ ಸತ್ಯನಾರಾಯಣ, ಅವರ ಪತ್ನಿ ಶಿವಮ್ಮ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪಾದ್ರಿ ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿದೆ ಎಂದು ಇನ್‌ಸ್ಪೆಕ್ಟರ್‌ ಸಿದ್ರಾಮಯ್ಯ ಬಿ.ಎಂ. ತಿಳಿಸಿದರು.

ಅಲೆಮಾರಿ ಬುಡ್ಗ ಜಂಗಮ ಸಮಾಜದ ಶಂಕರ ಎನ್ನುವವರು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ, ‘ತಮ್ಮ ಕುಟುಂಬದ ಸದಸ್ಯರಿಗೆ ಹಣದ ಆಸೆ ತೋರಿಸಿ ಮತಾಂತರ ಮಾಡಲಾಗಿದೆ. ಪಾದ್ರಿ ಸತ್ಯನಾರಾಯಣ ಬಲವಂತವಾಗಿ ನನಗೆ ದೀಕ್ಷೆ, ಸ್ನಾನದ ಹೆಸರಿನಲ್ಲಿ ನೀರಿನಲ್ಲಿ ಮುಳುಗಿಸಿ ಇಂದಿನಿಂದ ನೀವು, ನಿಮ್ಮ ಕುಟುಂಬದ ಸದಸ್ಯರು ಕ್ರೈಸ್ತ ಧರ್ಮಕ್ಕೆ ಸೇರಿದವರು ಎಂದು ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಿಸಿದರು. ನೀವು ಯಾವುದೇ ಹಿಂದು ಧರ್ಮದ ದೇವರನ್ನು ಪೂಜೆ ಮಾಡುವಂತಿಲ್ಲ ಎಂದು ಮನೆಯಲ್ಲಿದ್ದ ದೇವರ ಪೋಟೊಗಳನ್ನು ಕಾಲುವೆಯಲ್ಲಿ ಎಸೆದರು. ಹಿಂದೂ ದೇವರ ಪೂಜೆ ಮಾಡಿದರೆ ಕೊಲೆ, ಅತ್ಯಾಚಾರದ ಬೆದರಿಕೆ ಹಾಕಿದ ಪಾದ್ರಿಯ ಕಾರ್ಯದಿಂದ ನಾವೆಲ್ಲಾ ತೊಂದರೆ ಅನುಭವಿಸುತ್ತಿದ್ದೇವೆ. ಮನೆಯ ಸದಸ್ಯರನ್ನು ಚರ್ಚ್‌ನ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದರು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT