ದಟ್ಟ ಅರಣ್ಯದಲ್ಲಿ ರಕ್ಷಣಾ ಶಿಬಿರ, ತನಿಖಾ ಠಾಣೆ, ಬೇಟೆತಡೆ ಶಿಬಿರ, ವನ್ಯಜೀವಿ ಹತ್ಯೆ ತಡೆ ಶಿಬಿರಗಳಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಾರೆ. ಅಪಾಯದ ನಡುವೆ ಕಾರ್ಯನಿರ್ವಹಿಸುವವರಿಗೆ ಕನಿಷ್ಠ ವೇತನವನ್ನಾದರೂ ಸಮರ್ಪಕವಾಗಿ ನೀಡಬೇಕು. ಇವರು, ಅಪಾಯದಲ್ಲಿ ಕೆಲಸ ಮಾಡಿದರೂ, ವಿಶೇಷ ಭತ್ಯೆಯಾಗಿ ₹ 2 ಸಾವಿರ ಪ್ರೋತ್ಸಾಹ ಧನವನ್ನು ಕಾಯಂ ಸಿಬ್ಬಂದಿಗಷ್ಟೇ ನೀಡಿ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ’ ಎಂದೂ ಕಿಡಿಕಾರಿದರು.