ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ರಕ್ಷಕರ ನೇಮಕ ವಿಳಂಬ: ಅಸಮಾಧಾನ

Last Updated 3 ಅಕ್ಟೋಬರ್ 2020, 18:47 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮವು ನೆಡುತೋಪು ಅಧೀಕ್ಷಕರು, ಸಹಾಯಕ ನೆಡುತೋಪು ಅಧೀಕ್ಷಕರು ಹಾಗೂ ಅರಣ್ಯ ರಕ್ಷಕರು ಸೇರಿದಂತೆ 50 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿ, ನಾಲ್ಕು ವರ್ಷಗಳು ಪೂರ್ಣಗೊಂಡರೂ ಪ್ರಕ್ರಿಯೆ ಮುಗಿದಿಲ್ಲ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಹುದ್ದೆಗಳ ಭರ್ತಿಗೆ 2016ರಲ್ಲಿಯೇ ಅಧಿಸೂಚನೆ ಹೊರಡಿಸಲಾಗಿದೆ. 50 ಹುದ್ದೆಗಳಿಗೆ 10ಸಾವಿರಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದವರ ಪೈಕಿ ಹೆಚ್ಚು ಅಂಕ ಗಳಿಸಿದ 1,457 ಅಭ್ಯರ್ಥಿಗಳನ್ನು 1:20ರ ಅನುಪಾತದಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗೆ ಆಹ್ವಾನಿಸಿದ್ದಾರೆ. ಆದರೆ,ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದು ಅಭ್ಯರ್ಥಿ ಶರಣಬಸಪ್ಪ ದೂರಿದರು.

‘ನಾಲ್ಕು ವರ್ಷಗಳಿಂದ ಒಂದಲ್ಲ ಒಂದು ನೆಪ ಹೇಳುತ್ತಾರೆ. ಅರಣ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳನ್ನು ಕೇಳಿದರೆ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕೇಳಿ ಎನ್ನುತ್ತಾರೆ. ಅವರನ್ನು ಕೇಳಿದರೆ, ನಿಗಮದ ಅಧಿಕಾರಿಗಳೇ ಇದಕ್ಕೆ ಉತ್ತರ ನೀಡಬೇಕು ಎನ್ನುತ್ತಾರೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಪರೀಕ್ಷೆಯನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಆದರೆ, ಕಾರಣ ಮಾತ್ರ ತಿಳಿಸುತ್ತಿಲ್ಲ. ಈ ಹುದ್ದೆಯ ನಿರೀಕ್ಷೆಯಲ್ಲಿ ಬೇರೆ ಪರೀಕ್ಷೆಗಳತ್ತಲೂ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ವಯೋಮಿತಿ ಮೀರುವ ಆತಂಕದಲ್ಲಿದ್ದೇವೆ’ ಎಂದು ಮತ್ತೊಬ್ಬ ಅಭ್ಯರ್ಥಿ ಹೇಳಿದರು.

‘ಏಜೆನ್ಸಿಯೊಂದಕ್ಕೆ ಈ ಪ್ರಕ್ರಿಯೆ ನಡೆಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಕೆಲವು ಲೋಪದೋಷಗಳಾಗಿದ್ದಕ್ಕೆ ಪರೀಕ್ಷೆ ಮುಂದೂಡಲಾಗಿತ್ತು. ಮಾರ್ಚ್‌–ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಸುವ ಉದ್ದೇಶವಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದ ಮತ್ತೆ ಮುಂದೂಡಲಾಯಿತು. ಈಗ ಸರ್ಕಾರ ನೇಮಕಾತಿ ಸದ್ಯಕ್ಕೆ ಬೇಡ ಎಂದು ಹೇಳಿದೆ. ಆದರೂ, ಈ ಬಗ್ಗೆ ಒಂದೆರಡು ವಾರಗಳಲ್ಲಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಧು ಶರ್ಮಾ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT