‘ಏಜೆನ್ಸಿಯೊಂದಕ್ಕೆ ಈ ಪ್ರಕ್ರಿಯೆ ನಡೆಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಕೆಲವು ಲೋಪದೋಷಗಳಾಗಿದ್ದಕ್ಕೆ ಪರೀಕ್ಷೆ ಮುಂದೂಡಲಾಗಿತ್ತು. ಮಾರ್ಚ್–ಏಪ್ರಿಲ್ನಲ್ಲಿ ಪರೀಕ್ಷೆ ನಡೆಸುವ ಉದ್ದೇಶವಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದ ಮತ್ತೆ ಮುಂದೂಡಲಾಯಿತು. ಈಗ ಸರ್ಕಾರ ನೇಮಕಾತಿ ಸದ್ಯಕ್ಕೆ ಬೇಡ ಎಂದು ಹೇಳಿದೆ. ಆದರೂ, ಈ ಬಗ್ಗೆ ಒಂದೆರಡು ವಾರಗಳಲ್ಲಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಧು ಶರ್ಮಾ ‘ಪ್ರಜಾವಾಣಿ’ಗೆ ತಿಳಿಸಿದರು.