ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ದರ್ಜೆಯ ಸ್ಥಾನಮಾನ ನಿರಾಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

Last Updated 8 ಆಗಸ್ಟ್ 2021, 8:24 IST
ಅಕ್ಷರ ಗಾತ್ರ

ಬೆಂಗಳೂರು: ತಮಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಪತ್ರ ಬರೆದಿದ್ದಾರೆ.

ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು.

‘ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು’ ಎಂದು ಪತ್ರದಲ್ಲಿ ಯಡಿಯೂರಪ್ಪ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT