ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಡಿನ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಕುಮಾರಸ್ವಾಮಿ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ' ಎಂದು ತಿಳಿಸಿದ್ದಾರೆ.
Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.
— Narendra Modi (@narendramodi) December 16, 2020
ಎಚ್ಡಿಕೆ ಅವರಿಗೆ ಟ್ವೀಟ್ ಮೂಲಕ ಶುಭ ಹಾರೈಸಿರುವ ಯಡಿಯೂರಪ್ಪ, 'ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂಬುದಾಗಿ ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ.@hd_kumaraswamy
— B.S. Yediyurappa (@BSYBJP) December 16, 2020
ಕುಮಾರಸ್ವಾಮಿ ಅವರಿಗೆ ಶುಭ ಕೋರಿ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ, 'ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ' ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
— Shobha Karandlaje (@ShobhaBJP) December 16, 2020
ಭಗವಂತ ತಮಗೆ ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಹಾರೈಸುತ್ತೇನೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಶ್ರೀರಾಮುಲು ಸಂಸದ ಬಿ.ವೈ.ರಾಘವೇಂದ್ರ, ಜೆ.ಡಿ.ಎಸ್ ಮುಖಂಡರಾದ ವೈ.ಎಸ್.ವಿ ದತ್ತಾ, ಪ್ರಜ್ವಲ್ ರೇವಣ್ಣ ಮತ್ತು ಹಿರಿಯ ಕ್ರಿಕೆಟಿಗ ದೊಡ್ಡ ಗಣೇಶ ಸೇರಿದಂತೆ ಹಲವು ಗಣ್ಯರು ಕುಮಾರಸ್ವಾಮಿ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಜನ್ಮದಿನದ ಶುಭಾಶಯಗಳು.
— Pralhad Joshi (@JoshiPralhad) December 16, 2020
ದೇವರು ಅವರಿಗೆ ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. pic.twitter.com/cuINJHrPUL
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾಗಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು.
— Dr. Ashwathnarayan C. N. (@drashwathcn) December 16, 2020
@hd_kumaraswamy
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
— B Y Raghavendra (@BYRBJP) December 16, 2020
ಭಗವಂತನ ಕೃಪೆಯಿಂದ ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸುತ್ತೇನೆ. https://t.co/m4whIisooi
ಮಾಜಿ ಮುಖ್ಯಮಂತ್ರಿಗಳಾದ @hd_kumaraswamy ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. pic.twitter.com/CsYZUTI2Sk
— YSV Datta (@YSV_Datta) December 16, 2020
ರಾಜ್ಯದ ಮಾಜಿ ಮುಖ್ಯಮಂತ್ರಿ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ದೇವರು ನಿಮಗೆ ಆರೋಗ್ಯ, ಸಮೃದ್ಧಿ ಮತ್ತು ಶಾಂತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
— B Sriramulu (@sriramulubjp) December 16, 2020
ಕರ್ನಾಟಕದ ಮಾಜಿ ಮುಖ್ಯಮಂತ್ರಿ @hd_kumaraswamy ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. pic.twitter.com/TKDeZBlEID
— ದೊಡ್ಡ ಗಣೇಶ್ | Dodda Ganesh (@doddaganesha) December 16, 2020
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಹಾರೈಸುತ್ತೇನೆ.@hd_kumaraswamy
— Dr Sudhakar K (@mla_sudhakar) December 16, 2020
ಕೊರೊನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಸಂದರ್ಭದಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಅವರು ಸೋಮವಾರ ಟ್ವೀಟ್ ಮಾಡಿದ್ದರು.
‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ನೀಡಲಿ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ‘ಪ್ರಧಾನಿಯವರೇ ನಿಮ್ಮ ಶುಭ ಹಾರೈಕೆ ಗಳಿಗೆ ಧನ್ಯವಾದಗಳು’ ಎಂದು ಕುಮಾರ ಸ್ವಾಮಿ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ಮಾತ್ರವಲ್ಲ ಬಿಜೆಪಿಯ ರಾಷ್ಟ್ರೀಯ ಮುಖಂಡರು, ರಾಜ್ಯದ ಹಿರಿಯ ಮುಖಂಡರು, ಸಚಿವರು, ಸಂಸದರು ಸೇರಿದಂತೆ ಹಲವರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ಮಸೂದೆಗಳನ್ನು ಬೆಂಬಲಿಸಿರುವುದು ಮತ್ತು ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿಲುವಳಿಗೆ ಕೈಜೋಡಿಸಿದ ಬಳಿಕ ಎರಡೂ ಪಕ್ಷಗಳ ನಂಟು ಬಲಗೊಳ್ಳುತ್ತಿದೆ.
‘ಮೈತ್ರಿ‘ಯ ಮೂಲಕ ವಿಧಾನ ಪರಿಷತ್ ಸಭಾಪತಿಯವರ ಪದ ಚ್ಯುತಿಗೂ ಸಜ್ಜಾಗಿವೆ. ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ, ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಜತೆ ಸ್ನೇಹ ಬೆಳೆಸಲು ಬಿಜೆಪಿ ಉದ್ದೇಶಿಸಿದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.