ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೀಶಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ

Last Updated 5 ನವೆಂಬರ್ 2020, 11:38 IST
ಅಕ್ಷರ ಗಾತ್ರ

ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದೆ.

ಗುರುವಾರ ಬೆಳಿಗ್ಗೆ 7ಕ್ಕೆ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಇಲ್ಲಿನ ಉಪನಗರ ಠಾಣೆಗೆ ಅವರನ್ನು ಕರೆಯಿಸಿಕೊಂಡಿದ್ದರು. ನಂತರ ಸುದೀರ್ಘ 9 ಗಂಟೆಗಳ ವಿಚಾರಣೆ ನಂತರ ಸಂಜೆ ಬಂಧಿಸಿದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲು, ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ವಿನಯ ಅವರನ್ನು ಅಧಿಕಾರಿಗಳು ಕರೆದೊಯ್ದುರು.

ವಿನಯ ಕುಲಕರ್ಣಿ ಬಂಧನ ಸುದ್ದಿ ಹೊರಬೀಳುತ್ತಿದ್ದಂತೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಪ್ಪಲಿ ಹಿಡಿದು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿಬಿಐ ವಾಹನದಲ್ಲಿದ್ದ ವಿನಯ ಕುಲಕರ್ಣಿ ಅವರೊಂದಿಗೆ ಮಾತನಾಡಲು ಮುಗಿಬಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT