‘ಕೆಎಸ್ಆರ್ಟಿಸಿ ಸದಾ ಜನರ ಸೇವೆಯಲ್ಲಿ ತೊಡಗಿದೆ. ಇದೇ ಸೋಮವಾರದಿಂದ ಸೇವೆ ಆರಂಭವಾಗಲಿದೆ. ಪೂಜನೀಯ ಪುಟ್ಟಜ್ಜೋರ ಪುಣ್ಯಭೂಮಿ, ನನ್ನ ಹೃದಯಕ್ಕೆ ಹತ್ತಿರವಾದ ಸ್ಥಳ ಗದಗಕ್ಕೆ ವೋಲ್ವೊ ಸೇವೆಗಳನ್ನು ಪ್ರಾರಂಭಿಸುತ್ತೇವೆ. ಅಲ್ಲಿನ ಜನ ನನಗೆ ಯಾವಾಗಲೂ ವಿಶೇಷವೆನಿಸುತ್ತಾರೆ’ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಗದಗಕ್ಕೆ ವೋಲ್ವೊ ಬಸ್ ಒದಗಿಸುವ ಸ್ಪಷ್ಟ ಭರವಸೆ ನೀಡಿದ್ದಾರೆ.