ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ: ಗಣ್ಯರಿಂದ ಸ್ವಾಗತ

Last Updated 25 ಆಗಸ್ಟ್ 2020, 5:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಅವರುಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿ.ಟಿ.ರವಿ, ‘ಕರ್ನಾಟಕ ಪೊಲೀಸ್ ಇಲಾಖೆಯ ರಿಯಲ್ ‘ಸಿಂಗಂ’ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ.ತಮ್ಮ ದಕ್ಷ ಕಾರ್ಯವೈಖರಿಯಿಂದ ನಾಡಿನಾದ್ಯಂತ ಹೆಸರುವಾಸಿಯಾದ ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ. ನಿಮಗೆ ಹೃದಯಪೂರ್ವಕ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಇತ್ತ ಸಚಿವ ಸುಧಾಕರ್ ಕೂಡ ಟ್ವೀಟ್‌ ಮಾಡಿದ್ದು, ‘ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ’ ಎಂದಿದ್ದಾರೆ.

‘ಪೊಲೀಸ್ ಇಲಾಖೆಯಲ್ಲಿದ್ದಾಗ ತಮ್ಮ ದಕ್ಷತೆಗೆ, ಕಾರ್ಯತತ್ಪರತೆಗೆ ಹೆಸರಾಗಿದ್ದ ಶ್ರೀ ಅಣ್ಣಾಮಲೈ ರವರು ಇಂದು ಬಿಜೆಪಿಗೆ ಸೇರುತ್ತಿರುವ ವಿಷಯ ಅತ್ಯಂತ ಸಂತಸ ತಂದಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT