ಮೈಸೂರು:‘ಬಾಬಾ ಸಾಹೇಬರ ಮಾತಿಗೆ ಅನುಸಾರವಾಗಿ ರಾಜಕೀಯ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು, ರಾಜ್ಯದ ಏಳಿಗೆಗೆ ಶ್ರಮಿಸಿದ್ದೇವೆಂದು ನಾವು ಗರ್ವದಿಂದ ಹೇಳುತ್ತೇವೆ. ಹೀಗೆ ಹೇಳುವ ನೈತಿಕತೆ, ಕೋಮುವಾದಿಗಳ ಜೊತೆ ಸೇರಿಕೊಂಡಿರುವ ಸಂಸದ ಶ್ರೀನಿವಾಸಪ್ರಸಾದ್ ಅವರಲ್ಲಿ ಉಳಿದಿದೆಯೇ’ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.