<p><strong>ಮೈಸೂರು:</strong>‘ಬಾಬಾ ಸಾಹೇಬರ ಮಾತಿಗೆ ಅನುಸಾರವಾಗಿ ರಾಜಕೀಯ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು, ರಾಜ್ಯದ ಏಳಿಗೆಗೆ ಶ್ರಮಿಸಿದ್ದೇವೆಂದು ನಾವು ಗರ್ವದಿಂದ ಹೇಳುತ್ತೇವೆ. ಹೀಗೆ ಹೇಳುವ ನೈತಿಕತೆ, ಕೋಮುವಾದಿಗಳ ಜೊತೆ ಸೇರಿಕೊಂಡಿರುವ ಸಂಸದ ಶ್ರೀನಿವಾಸಪ್ರಸಾದ್ ಅವರಲ್ಲಿ ಉಳಿದಿದೆಯೇ’ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.</p>.<p>‘ಲೋಕಸಭಾ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿರುವ ಪ್ರಸಾದ್, ಕೇವಲ ಒಣ ರಾಜಕೀಯದಲ್ಲಿ ಮಗ್ನರಾಗಿದ್ದು, ಬಾಬಾ ಸಾಹೇಬರ ಶ್ರಮದಿಂದ ದೊರೆತ ಅಧಿಕಾರದ ಉದ್ದೇಶ ಹಾಗೂ ಅದರ ಮಹತ್ವ ಹಾಳು ಮಾಡುತ್ತಿದ್ದಾರೆ’ ಎಂದುಟೀಕಿಸಿದ್ದಾರೆ.</p>.<p>‘2018ರ ವಿಧಾನಸಭೆ ಚುನಾವಣೆಯಲ್ಲಿ ಒಂದು ಯಶಸ್ವಿ ಸರ್ಕಾರವನ್ನು ಉರುಳಿಸಲು ಮತ್ತು ಶೋಷಿತರ ಹಾಗೂ ಅಹಿಂದ ವರ್ಗ ಗಳ ಕೈಯಿಂದ ಅಧಿಕಾರವನ್ನು ಕಿತ್ತುಕೊಳ್ಳಲು ಯಾರೆಲ್ಲಾ ಸಂಚು ಮಾಡಿದ್ದಾರೆಂದು ನನಗೂ ಗೊತ್ತಿದೆ. ಈ ಬಗ್ಗೆ ಪ್ರಸಾದ್ ಅವರಿಗೂ ಮಾಹಿತಿ ಇರಬಹುದು’ ಎಂದಿದ್ದಾರೆ.</p>.<p>‘ನಂಜನಗೂಡು ಉಪಚುನಾವಣೆಯಲ್ಲಿ ಅವರನ್ನುನಾನು ಮತ್ತು ಸಿದ್ದರಾಮಯ್ಯ ಸೇರಿ ಸೋಲಿಸಿರುವುದಾಗಿ ಹೇಳಿದ್ದಾರೆ. ಹಾಗಿದ್ದರೆ ಉಪಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಬಿಟ್ಟು, ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಗೆಲ್ಲಿಸಬೇಕಾಗಿತ್ತೇ?’ ಎಂದೂ ಅವರು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong>‘ಬಾಬಾ ಸಾಹೇಬರ ಮಾತಿಗೆ ಅನುಸಾರವಾಗಿ ರಾಜಕೀಯ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು, ರಾಜ್ಯದ ಏಳಿಗೆಗೆ ಶ್ರಮಿಸಿದ್ದೇವೆಂದು ನಾವು ಗರ್ವದಿಂದ ಹೇಳುತ್ತೇವೆ. ಹೀಗೆ ಹೇಳುವ ನೈತಿಕತೆ, ಕೋಮುವಾದಿಗಳ ಜೊತೆ ಸೇರಿಕೊಂಡಿರುವ ಸಂಸದ ಶ್ರೀನಿವಾಸಪ್ರಸಾದ್ ಅವರಲ್ಲಿ ಉಳಿದಿದೆಯೇ’ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.</p>.<p>‘ಲೋಕಸಭಾ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿರುವ ಪ್ರಸಾದ್, ಕೇವಲ ಒಣ ರಾಜಕೀಯದಲ್ಲಿ ಮಗ್ನರಾಗಿದ್ದು, ಬಾಬಾ ಸಾಹೇಬರ ಶ್ರಮದಿಂದ ದೊರೆತ ಅಧಿಕಾರದ ಉದ್ದೇಶ ಹಾಗೂ ಅದರ ಮಹತ್ವ ಹಾಳು ಮಾಡುತ್ತಿದ್ದಾರೆ’ ಎಂದುಟೀಕಿಸಿದ್ದಾರೆ.</p>.<p>‘2018ರ ವಿಧಾನಸಭೆ ಚುನಾವಣೆಯಲ್ಲಿ ಒಂದು ಯಶಸ್ವಿ ಸರ್ಕಾರವನ್ನು ಉರುಳಿಸಲು ಮತ್ತು ಶೋಷಿತರ ಹಾಗೂ ಅಹಿಂದ ವರ್ಗ ಗಳ ಕೈಯಿಂದ ಅಧಿಕಾರವನ್ನು ಕಿತ್ತುಕೊಳ್ಳಲು ಯಾರೆಲ್ಲಾ ಸಂಚು ಮಾಡಿದ್ದಾರೆಂದು ನನಗೂ ಗೊತ್ತಿದೆ. ಈ ಬಗ್ಗೆ ಪ್ರಸಾದ್ ಅವರಿಗೂ ಮಾಹಿತಿ ಇರಬಹುದು’ ಎಂದಿದ್ದಾರೆ.</p>.<p>‘ನಂಜನಗೂಡು ಉಪಚುನಾವಣೆಯಲ್ಲಿ ಅವರನ್ನುನಾನು ಮತ್ತು ಸಿದ್ದರಾಮಯ್ಯ ಸೇರಿ ಸೋಲಿಸಿರುವುದಾಗಿ ಹೇಳಿದ್ದಾರೆ. ಹಾಗಿದ್ದರೆ ಉಪಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಬಿಟ್ಟು, ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಗೆಲ್ಲಿಸಬೇಕಾಗಿತ್ತೇ?’ ಎಂದೂ ಅವರು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>