ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು, ‘ಎರಡೂ ಕಡೆಗಳಲ್ಲಿ ನಮ್ಮದೇ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ, ಕೇಂದ್ರದಲ್ಲಿ ಎರಡೂ ಕಡೆಗಳಲ್ಲಿ ಆಡಳಿತವಿದ್ದರೂ, ಜನಪರ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದ್ದು, ರೋಸಿ ಹೋಗಿದ್ದೇನೆ. ಜನಪರವಾದ ಕೆಲಸ ಮಾಡಬಲ್ಲ ಭರವಸೆಯನ್ನು ಆಮ್ ಆದ್ಮಿ ಪಕ್ಷದಲ್ಲಿ ಕಂಡಿದ್ದೇನೆ. ಈ ಕಾರಣದಿಂದ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷ ಸೇರಿದ್ದೇನೆ’ ಎಂದರು.