ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಜೀವರಾಜ್, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2008–2013ರ ಅವಧಿಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಆಡಳಿತ ಪಕ್ಷದ ಮುಖ್ಯಸಚೇತಕರಾಗಿ, ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಗಿ ಕಾರ್ಯನಿರ್ವಹಿಸಿದವರು.
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಯಡಿಯೂರಪ್ಪ ಆಪ್ತ ಎನ್.ಆರ್. ಸಂತೋಷ್ ಅವರು ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಎಸ್.ಆರ್. ವಿಶ್ವನಾಥ್ ಈ ಹುದ್ದೆಯಲ್ಲಿದ್ದರು. ಬಿಡಿಎ ಅಧ್ಯಕ್ಷರಾದ ಬಳಿಕ ಅವರು ಹುದ್ದೆಗೆ ರಾಜೀನಾಮೆ ಕೊಟ್ಟಿದ್ದರು. ಈಗ ಜೀವರಾಜ್ ನೇಮಕವಾಗಿ ರುವುದರಿಂದ ಮೂರು ರಾಜಕೀಯ ಕಾರ್ಯದರ್ಶಿಗಳ ಸೃಷ್ಟಿಯಾದಂತಾಗಿದೆ.