ಚನ್ನರಾಯಪಟ್ಟಣ:ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಶನಿವಾರಬೆಳಿಗ್ಗೆಕಾರೊಂದು ಕಂಟೇನರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು,ಕಾರಿನಲ್ಲಿದ್ದ ನಾಲ್ವರು ಸ್ನೇಹಿತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕೆರೆಕತ್ತಿಗನೂರಿನ ಚೇತನ್ (28), ಬೆಂಗಳೂರು ಅಂಚೆಪಾಳ್ಯದ ಮಂಜುನಾಥ್ (29), ಬೆಂಗಳೂರು ಕನಕಪುರ ರಸ್ತೆ ಬಡಾವಣೆಯ ವಿಕ್ರಂ (29), ಶಾಖಾನಗರದ ಅಭಿಷೇಕ್ (29) ಮೃತಪಟ್ಟವರು. ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರನ್ನು ಕಂಟೇನರ್ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಎರಡು ಕಾರಿನಲ್ಲಿ, 8 ಜನ ಸ್ನೇಹಿತರು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಮತ್ತೊಂದು ಕಾರಿನಲ್ಲಿ ಬರುತ್ತಿದ್ದ ಸ್ನೇಹಿತರು, ಕಂಟೇನರ್ ನಿಲ್ಲಿಸಿದ್ದಾರೆ. ಕಾರನ್ನು ಕ್ರೇನ್ ಸಹಾಯದಿಂದ ಬಿಡಿಸಿದ್ದಾರೆ.
ಈ ನಾಲ್ವರು ಸ್ನೇಹಿತರು ಬೆಂಗಳೂರಿನಲ್ಲಿ ಒಟ್ಟಿಗೆ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಚೇತನ್, ಅಬಕಾರಿ ಸಬ್ ಇನ್ಸ್ಪೆಕ್ಟರ್ ತರಬೇತಿ ಪೂರ್ಣಗೊಳಿಸಿದ್ದು, ಸೋಮವಾರ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕಿತ್ತು. ಉಳಿದ ಮೂವರು ಸಾಫ್ಟ್ವೇರ್ ಎಂಜಿನಿಯರ್ಗಳು.
ಹಾಸನಕ್ಕೆ ತೆರಳುತ್ತಿದ್ದಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,ಅಪಘಾತ ವಿಷಯ ತಿಳಿದು ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಭೇಟಿ ನೀಡಿದರು. ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ
ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.