ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಟಾ ಸಮೀಪ ದೋಣಿ ಮುಳುಗಡೆ: ಮೀನುಗಾರರ ರಕ್ಷಣೆ

Last Updated 20 ಆಗಸ್ಟ್ 2020, 13:58 IST
ಅಕ್ಷರ ಗಾತ್ರ

ಕುಮಟಾ: ತಾಲ್ಲೂಕಿನ ಧಾರೇಶ್ವರ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಟ್ರಾಲರ್ ದೋಣಿಯೊಂದು ಗುರುವಾರ ಮುಳುಗಿದೆ. ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಅಕ್ಕಪಕ್ಕದ ದೋಣಿಗಳಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.

ನೀರಿನಲ್ಲಿ ಮುಳುಗಿದ ದೋಣಿಯಲ್ಲಿದ್ದ ಮೋಹನ ಕೃಷ್ಣಪ್ಪ ಹರಿಕಾಂತ, ಮಂಜುನಾಥ ಬುದ್ಧು ಹರಿಕಾಂತ, ಮಹೇಂದ್ರ ಶಂಕರ ಗಾವಡಿ ಹಾಗೂ ವಿಠ್ಠಲ ಗಾವಡಿ ಪ್ರಾಣಾಪಾಯದಿಂದ ‍ಪಾರಾಗಿದ್ದಾರೆ. ಅವರನ್ನು ಬೇರೆ ದೋಣಿಯಲ್ಲಿ ತದಡಿ ಬಂದರಿಗೆ ಕರೆದುಕೊಂಡು ಬಂದು, ಅಲ್ಲಿಂದ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮುದ್ರದಲ್ಲಿ ಮುಳುಗಿದ್ದ ದೋಣಿಯನ್ನು ಎಳೆದು ದಡಕ್ಕೆ ತರಲಾಗಿದೆ.

‘ವಿಜಯಲಕ್ಷ್ಮೀ– 2’ ಹೆಸರಿನ ಈ ದೋಣಿಯುಕಿಮಾನಿಯ ಕೇಸರಿ ಮೋಹನ್ ಹರಿಕಾಂತ ಎಂಬುವರಿಗೆ ಸೇರಿದ್ದಾಗಿದೆ ಎಂದು ಮಿನುಗಾರಿಕಾ ಸಹಾಯಕ ನಿರ್ದೇಶಕ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT