ಸಂಸ್ಥೆಯ ಕೆಲ ಸಿಬ್ಬಂದಿ ವಾಟ್ಸ್ಆ್ಯಪ್ ಗ್ರುಪ್ ರಚಿಸಿಕೊಂಡಿದ್ದು, ಅದರಲ್ಲಿ ಶ್ರೀಹರಿ ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿದ್ದ. ಅವುಗಳನ್ನು ಉಳಿದವರು ಮತ್ತೆ ಹಲವರಿಗೆ ಕಳುಹಿಸಿದ್ದಾರೆ. ಇದರಿಂದ ನಿಷ್ಠಾವಂತ ಸಿಬ್ಬಂದಿ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. ಕಾನೂನು ಬಾಹಿರ ಮುಷ್ಕರಕ್ಕೆ ಕುಮ್ಮಕ್ಕು ನೀಡಿರುವ ಕುರಿತು ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಹಾಗೂ ಇನ್ನೂ ಹಲವಾರು ವಾಟ್ಸ್ಆ್ಯಪ್ ಗುಂಪುಗಳಿದ್ದು, ಅವುಗಳಲ್ಲಿ ಬಹಳಷ್ಟು ಸಿಬ್ಬಂದಿ ಸಕ್ರಿಯವಾಗಿರುವುದು ತಿಳಿದು ಬಂದಿದೆ. ಇದರ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ ಎಂದರು.