ಕೋವಿಡ್ ನಂತರದ ಕಾಲದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆಗೆ ಬಹಳ ಮಹತ್ವವಿದೆ. ಸರಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಎಡವಟ್ಟು ಮಾಡಿಕೊಂಡ ಕಾರಣಕ್ಕೆ ಓಲಾ ಕಂಪನಿ ಕರ್ನಾಟಕದ ಕೈ ಜಾರಿತು. ₹7,614 ಕೋಟಿ ಹೂಡಿಕೆ ತಮಿಳುನಾಡು ರಾಜ್ಯದ ಪಾಲಾಯಿತು. ಚುನಾವಣೆ, ಪ್ರಚಾರಕ್ಕಿಂತ ಜನರ ಬದುಕು ಮುಖ್ಯ. ಈ ಸರ್ಕಾರಕ್ಕೆ ಅಧಿಕಾರವೇ ಮುಖ್ಯ. ಉಳಿದಿದ್ದೆಲ್ಲ ಬೇಕಿಲ್ಲ. ಕನ್ನಡಿಗರ ಕಷ್ಟಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ ಎಂದು ಟ್ವೀಟ್ನಲ್ಲಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.