‘ಶೋಭಾ ಕರಂದ್ಲಾಜೆ ಅವರ ಆಪ್ತನೆಂದು ಹೇಳಿಕೊಂಡು ರಾಜ್ಯ ಹಾಗೂ ಹೊರ ರಾಜ್ಯಗಳ ಹಲವು ಜಮೀನ್ದಾರರಿಗೆ ಕರೆ ಮಾಡಿದ್ದ ಆರೋಪಿ, ನಾನಾ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಜಮೀನ್ದಾರರೊಬ್ಬರು ಸಚಿವರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ. ವಂಚನೆಗೆ ಬಳಸಿದ್ದ ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿ ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.