<p><strong>ಬೆಂಗಳೂರು: </strong>ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ ಯೋಜನೆಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗಣಿ, ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಆಗು ತ್ತಿರುವ ಕಿರುಕುಳವನ್ನು ತಪ್ಪಿಸುವುದು ಸರ್ಕಾರದ ಉದ್ದೇಶ ಎಂದರು.</p>.<p>ಈ ರೀತಿ ತೆಗೆದ ಮರಳನ್ನು ಸ್ವಂತ ಮನೆ ಅಥವಾ ಕಟ್ಟಡಗಳಿಗೆ ಮಾತ್ರ ಉಪಯೋಗಿಸಬೇಕು. ಅದನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ, ದ್ವಿಚಕ್ರ ವಾಹನ ಮತ್ತು ಕತ್ತೆಗಳ ಮೇಲೆ ಮಾತ್ರ ಸಾಗಿಸಬಹುದು. ಹೊರ ಜಿಲ್ಲೆಗಳಿಗೆ ಸಾಗಿಸುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಮರಳು ಗಣಿಗಾರಿಕೆಗೆ ನಿಗದಿ ಮಾಡಿದ ಪ್ರದೇಶ ಬಿಟ್ಟು ಬೇರೆ ಕಡೆಯಲ್ಲಿ ಮರಳು ತೆಗೆಯಬಹುದು. ಹಳ್ಳ, ತೊರೆ<br />ಗಳಿಂದಲೂ ಮರಳು ತೆಗೆಯಬಹುದು. ಆದರೆ ಮರಳನ್ನು ಸಂಗ್ರಹಿಸಿಡುವಂತಿಲ್ಲ ಮತ್ತು ಮಾರುವುದಕ್ಕೆ ಅವಕಾಶವಿಲ್ಲ. ಮರಳು ತೆಗೆಯುವವರು ಗ್ರಾಮಪಂಚಾಯ್ತಿಗೆ ₹100 ಪಾವತಿಸಬೇಕು ಎಂದರು.</p>.<p class="Subhead">183 ಬ್ಲಾಕ್ಗಳಲ್ಲಿ ಮರಳು ತೆಗೆಯಲು ಅವಕಾಶ: ರಾಜ್ಯದಲ್ಲಿ ಒಟ್ಟು 183 ಬ್ಲಾಕ್ಗಳಲ್ಲಿ ಮಾತ್ರ ಮರಳು ತೆಗೆಯಲು ಅವಕಾಶ ನೀಡಲಾಗುವುದು. ಪ್ರತಿ ಟನ್ ಮರಳು ತೆಗೆಯಲು ₹300 ನಿಗದಿ ಮಾಡಲಾಗುವುದು. ಟಿಪ್ಪರ್, ಲಾರಿ ಮತ್ತಿತರ ವಾಹನಗಳಲ್ಲಿ ಮರಳು ಸಾಗಣೆ ಮಾಡಬಹುದು. ಇದರ ಮೇಲೆ ರಾಯಧನ ವಿಧಿಸಲಾಗುವುದು. ತಮ್ಮ ಜಿಲ್ಲೆಯಲ್ಲೇ ಮಾರಾಟ ಮಾಡಿ<br />ಕೊಳ್ಳಬಹುದು. ಆದರೆ, ನೆರೆಯ ಜಿಲ್ಲೆ ಮತ್ತು ರಾಜ್ಯಗಳಿಗೆ ಸಾಗಿಸುವಂತಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ ಯೋಜನೆಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗಣಿ, ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಆಗು ತ್ತಿರುವ ಕಿರುಕುಳವನ್ನು ತಪ್ಪಿಸುವುದು ಸರ್ಕಾರದ ಉದ್ದೇಶ ಎಂದರು.</p>.<p>ಈ ರೀತಿ ತೆಗೆದ ಮರಳನ್ನು ಸ್ವಂತ ಮನೆ ಅಥವಾ ಕಟ್ಟಡಗಳಿಗೆ ಮಾತ್ರ ಉಪಯೋಗಿಸಬೇಕು. ಅದನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ, ದ್ವಿಚಕ್ರ ವಾಹನ ಮತ್ತು ಕತ್ತೆಗಳ ಮೇಲೆ ಮಾತ್ರ ಸಾಗಿಸಬಹುದು. ಹೊರ ಜಿಲ್ಲೆಗಳಿಗೆ ಸಾಗಿಸುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಮರಳು ಗಣಿಗಾರಿಕೆಗೆ ನಿಗದಿ ಮಾಡಿದ ಪ್ರದೇಶ ಬಿಟ್ಟು ಬೇರೆ ಕಡೆಯಲ್ಲಿ ಮರಳು ತೆಗೆಯಬಹುದು. ಹಳ್ಳ, ತೊರೆ<br />ಗಳಿಂದಲೂ ಮರಳು ತೆಗೆಯಬಹುದು. ಆದರೆ ಮರಳನ್ನು ಸಂಗ್ರಹಿಸಿಡುವಂತಿಲ್ಲ ಮತ್ತು ಮಾರುವುದಕ್ಕೆ ಅವಕಾಶವಿಲ್ಲ. ಮರಳು ತೆಗೆಯುವವರು ಗ್ರಾಮಪಂಚಾಯ್ತಿಗೆ ₹100 ಪಾವತಿಸಬೇಕು ಎಂದರು.</p>.<p class="Subhead">183 ಬ್ಲಾಕ್ಗಳಲ್ಲಿ ಮರಳು ತೆಗೆಯಲು ಅವಕಾಶ: ರಾಜ್ಯದಲ್ಲಿ ಒಟ್ಟು 183 ಬ್ಲಾಕ್ಗಳಲ್ಲಿ ಮಾತ್ರ ಮರಳು ತೆಗೆಯಲು ಅವಕಾಶ ನೀಡಲಾಗುವುದು. ಪ್ರತಿ ಟನ್ ಮರಳು ತೆಗೆಯಲು ₹300 ನಿಗದಿ ಮಾಡಲಾಗುವುದು. ಟಿಪ್ಪರ್, ಲಾರಿ ಮತ್ತಿತರ ವಾಹನಗಳಲ್ಲಿ ಮರಳು ಸಾಗಣೆ ಮಾಡಬಹುದು. ಇದರ ಮೇಲೆ ರಾಯಧನ ವಿಧಿಸಲಾಗುವುದು. ತಮ್ಮ ಜಿಲ್ಲೆಯಲ್ಲೇ ಮಾರಾಟ ಮಾಡಿ<br />ಕೊಳ್ಳಬಹುದು. ಆದರೆ, ನೆರೆಯ ಜಿಲ್ಲೆ ಮತ್ತು ರಾಜ್ಯಗಳಿಗೆ ಸಾಗಿಸುವಂತಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>